ದುಷ್ಕರ್ಮಿಗಳಿಂದ ಮಹಿಳೆಯೋರ್ವಳನ್ನು ಚೂಪಾದ ಕಂಬಿಯಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ನಗರದ ಬನಶಂಕರಿ ಠಾಣಾ ವ್ಯಾಪ್ತಿಯ ಯಾರಬ್ ನಗರದಲ್ಲಿ ನಡೆದಿದೆ. ಆಪ್ರೀನ್ ಖಾನಂ ಎಂಬ ಮಹಿಳೆ ಕೊಲೆ ಮಾಡಿ ಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಮಹಿಳೆಯ ಪತಿ ಬೀಗ ಹೊಡೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇನ್ನು ಪರಿಚಿತ ವ್ಯಕ್ತಿಯಿಂದಲೇ ಕೊಲೆಯಾಗಿರೋ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಆರೋಪಿಗಾಗಿ ಪೊಲೀಸರು ತನಿಖೆ ಶುರುಮಾಡಿದ್ದಾರೆ.
Share

