ಚಿತ್ರದುರ್ಗ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆಯಲ್ಲಿ ತೊಡಗಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಂಭ್ರಮ ಹಂಚಿಕೊಂಡರು.
ಈ ವೇಳೆ ನೂತನ ಮುಖ್ಯಮಂತ್ರಿಗೆ ಜೈಕಾರ ಕೂಗಿದ ಕಾರ್ಯಕರ್ತರು, ಪಕ್ಷದ ಪರ ಘೋಷಣೆಗಳನ್ನು ಹಾಕಿದರು.
ಕಚೇರಿ ಮುಂಭಾಗದಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಕಟೌಟ್ ಅನ್ನು ಸ್ಥಾಪಿಸಿದ ಕಾರ್ಯಕರ್ತರು, ಸಂಭ್ರಮದ ವಾತಾವರಣವನ್ನು ಮತ್ತಷ್ಟು ಹೆಚ್ಚಿಸಿದರು. ಈ ಸಂದರ್ಭದಲ್ಲಿ 'ಟ್ರಬಲ್ ಶೂಟರ್' ಎಂಬ ಅಕ್ಷರಗಳಿರುವ ದೊಡ್ಡ ಕೇಕ್ ಅನ್ನು ಕತ್ತರಿಸಿ ವಿಶೇಷವಾಗಿ ಆಚರಿಸಲಾಯಿತು.
ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿದ ಕಾರ್ಯಕರ್ತರು, ರಾಜ್ಯದಲ್ಲಿ ಹೊಸ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳು ವೇಗ ಪಡೆಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

