ಇಂಡಿಯನ್ ಪ್ರೀಮಿಯರ್ ಲೀಗ್ 2026 ಟೂರ್ನಿ ಹಿನ್ನೆಲೆಯಲ್ಲಿ ಕ್ರಿಕೆಟ್ ವಲಯದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಬಾಂಗ್ಲಾದೇಶದ ಆಟಗಾರರಿಗೆ ಮತ್ತೆ ಐಪಿಎಲ್ನಲ್ಲಿ ಆಡಲು ಅವಕಾಶ ನೀಡುವ ಬಗ್ಗೆ ಸುಳಿವು ದೊರೆತಿದೆ.
ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್ ಮಾತನಾಡಿ, 2026ರ ಐಪಿಎಲ್ಗೆ ಮುನ್ನ ಬಾಂಗ್ಲಾದೇಶ ಆಟಗಾರರು ಎದುರಿಸಿದ ಸಮಸ್ಯೆಗಳು ಮುಂದಿನಲ್ಲಿ ಮರುಕಳಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಹಿಂದೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 9.20 ಕೋಟಿ ರೂ.ಗೆ ಖರೀದಿಸಿತ್ತು. ಇದರಿಂದ ಅವರು ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತಕ್ಕೆ ಸೇಲ್ ಆದ ಬಾಂಗ್ಲಾದೇಶ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ರಾಜಕೀಯ ಪರಿಸ್ಥಿತಿಗಳ ಕಾರಣದಿಂದ ಅವರು ಟೂರ್ನಿಯಿಂದ ಹೊರಗುಳಿಯಬೇಕಾಯಿತು.
ಈ ಕುರಿತು ಪ್ರತಿಕ್ರಿಯಿಸಿದ ಧುಮಾಲ್, ಕೆಲವೊಂದು ಘಟನೆಗಳು ದುರಾದೃಷ್ಟಕರವಾಗುತ್ತವೆ. ಕೇಂದ್ರ ಸರ್ಕಾರ ಕ್ರಿಕೆಟ್ ವ್ಯವಹಾರಗಳಲ್ಲಿ ನೇರ ಹಸ್ತಕ್ಷೇಪ ಮಾಡುವುದಿಲ್ಲ. ಆದಾಗ್ಯೂ ಸುತ್ತಮುತ್ತ ನಡೆಯುವ ಬೆಳವಣಿಗೆಗಳು ಕೆಲ ನಿರ್ಧಾರಗಳಿಗೆ ಕಾರಣವಾಗುತ್ತವೆ ಎಂದರು.
ಇದಲ್ಲದೆ, 2026ರ ಐಪಿಎಲ್ ವೇಳೆಗೆ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೊಂದೆಡೆ, ಈ ಘಟನೆ ನಂತರ ಬಾಂಗ್ಲಾದೇಶ ಕ್ರಿಕೆಟ್ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಟಿ20 ವಿಶ್ವಕಪ್ ಪಂದ್ಯಗಳಿಗೆ ತಂಡವನ್ನು ಕಳುಹಿಸುವುದಿಲ್ಲ ಎಂದು ಘೋಷಣೆ ಮಾಡಲಾಗಿತ್ತು. ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಗಿಟ್ಟು, ಸ್ಕಾಟ್ಲೆಂಡ್ ತಂಡಕ್ಕೆ ಅವಕಾಶ ನೀಡಿತು.

