Dailyhunt
ನಾಲ್ವರನ್ನು ಬಲಿ ತೆಗೆದುಕೊಂಡಿದ್ದ ನರಹಂತಕ ಹುಲಿ ಸೆರೆ

ನಾಲ್ವರನ್ನು ಬಲಿ ತೆಗೆದುಕೊಂಡಿದ್ದ ನರಹಂತಕ ಹುಲಿ ಸೆರೆ

AIN Kannada 4 years ago

ಚಾಮರಾಜನಗರ: ನಾಲ್ವರನ್ನು ಬಲಿ ತೆಗೆದುಕೊಂಡಿದ್ದ ನರಹಂತಕ ಹುಲಿಯನ್ನು ಸೆರೆ ಹಿಡಿಯುವಲ್ಲಿ ತಮಿಳುನಾಡಿನ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಇನ್ನೂ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ 21 ದಿನಗಳಿಂದ ಹುಲಿ ಸೆರೆಗೆ ವಿಶೇಷ ಕಾರ್ಯಚರಣೆ ನಡೆಸಿದ ತಮಿಳುನಾಡು ಅರಣ್ಯ ಸಿಬ್ಬಂದಿಗಳು ವಿಜಯ ದಶಮಿ‌ ದಿನವಾದ ಶುಕ್ರವಾರ ಸೆರೆ ಹಿಡಿದಿದ್ದಾರೆ.

ಹುಲಿಯು ಗೂಡ್ಲೂರು ಬಳಿ ನಾಲ್ವರನ್ನು ಕೊಂದು ಹಾಕಿತ್ತು. ‌ಈ ಹುಲಿ ಸೆರೆಗೆ ಬಂಡೀಪುರದಿಂದ ರಾಣಾ ಶ್ವಾನವನ್ನು ಬಳಕೆ ಮಾಡಿಕೊಳ್ಳಲಾಗಿತ್ತು. ಅಲ್ಲದೆ ಪತ್ತೇದಾರಿಕೆಯಲ್ಲಿ ಹೆಸರಾದ ರಾಣಾನ‌ ಸಹಾಯದಿಂದ ಹುಲಿ ಸೆರೆಯಾಯಿತು. ಇನ್ನು ಸೆರೆ ಸಿಕ್ಕ ಹುಲಿಯನ್ನು ಮಧು ಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ಆರೈಕೆ ಮಾಡಲು ಅರಣ್ಯ ಅಧಿಕಾರಿಗಳು ನಿರ್ಧರಿಸಿದ್ದಾರೆ.

Share

Continue Reading

Dailyhunt
Disclaimer: This content has not been generated, created or edited by Dailyhunt. Publisher: AIN Live News