ಬೆಂಗಳೂರು : ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು ಅನ್ನೋದು ಜನರ ಮತ್ತು ನನ್ನ ವೈಯಕ್ತಿಯ ಅಭಿಪ್ರಾಯ. ಇದು ಪಕ್ಷ ವಿರೋಧಿ ಹೇಳಿಕೆಯಾಗಲ್ಲ ಎಂದು ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.ಆರ್.ಆರ್.ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. ಪರ ಪ್ರಚಾರ ನಡೆಸಿದ ಜಮೀರ್ ಅಹ್ಮದ್ ಮಾಧ್ಯಮಗಳ ಜೊತೆ ಮಾತನಾಡಿದರು. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜನರ ಅಭಿಪ್ರಾಯವನ್ನ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗಲ್ಲ. ಆದರೆ ಕಾಂಗ್ರೆಸ್ ನಲ್ಲಿ ಹೈಕಮಾಂಡ್ ಸಿಎಂ ಯಾರಾಗಬೇಕು ಎಂಬುದನ್ನ ನಿರ್ಧರಿಸುತ್ತದೆ.
ನನಗೆ ಶಿಸ್ತು ಕ್ರಮದ ನೋಟಿಸ್ ಕೊಟ್ಟರೆ ಅದಕ್ಕೆ ಉತ್ತರಿಸುತ್ತೇನೆ ಎಂದರು.ಬೈ ಎಲೆಕ್ಷನ್ ಬಳಿಕ ರಾಜ್ಯ ರಾಜಕೀಯ ಬದಲಾವಣೆ ಆಗಿ ಮತ್ತೆ ಚುನಾವಣೆ ಬರಬಹುದು.
ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದ್ರೆ ಚುನಾವಣೆ ಬರುವ ಸಾಧ್ಯತೆ ಕಂಡು ಬರುತ್ತಿದೆ. ಆದರೆ ಜನಾಭಿಪ್ರಾಯದ ಜೊತೆಗೆ ನನ್ನ ವೈಯುಕ್ತಿಕ ಅಭಿಪ್ರಾಯವು ಮತ್ತೆ ಸಿದ್ದರಾಮಯ್ಯ ನವರೆ ಸಿಎಂ ಆಗಬೇಕು. ಹೈ ಕಮಾಂಡ್ ಕೇಳಿದರೂ ನಾನು ಸಿದ್ದರಾಮಯ್ಯತೇ ಸಿಎಂ ಆಗಬೇಕು ಅಂತ ಹೇಳ್ತೀನಿ ಎಂದು ತಮ್ಮ ಹೇಳಿಕೆಯನ್ನ ಜಮೀರ್ ಅಹ್ಮದ್ ಪುನರುಚ್ಛಿಸಿದರು.
ಐದು ವರ್ಷಕ್ಕೆ ಒಮ್ಮೆ ಚುನಾವಣೆ ಬರುತ್ತದೆ, ಈಗ ಎರಡೂವರೆ ವರ್ಷಕ್ಕೆ ಚುನಾವಣೆ ಬಂದಿದ್ದಿಂದ ಜನರು ಕೂಡ ಗೊಂದಲದಲ್ಲಿದ್ದಾರೆ. ಆರ್.ಆರ್.ನಗರದಲ್ಲಿ ಈ ಚುನಾವಣೆ ಬಂದಿರುವುದಕ್ಕೆ ಜನ ಬೇಸರದಲ್ಲಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕೊಟ್ಟ ಹಣದಿಂದ ಈ ಕ್ಷೇತ್ರ ಅಭಿವೃದ್ಧಿ ಆಗಿದೆ. ಈ ಸರ್ಕಾರದಲ್ಲಿ ಈ ಕ್ಷೇತ್ರಕ್ಕೆ ಯಾವ ಹಣ ಕೂಡ ಬಂದಿಲ್ಲ. ಇಲ್ಲಿ ಹೆದರುಸುವ ಕೆಲಸ ನಡೆಯುತ್ತಿದ್ದು, ಯಾರಿಗೆ ಯಾರು ಹೆದರುವ ಅವಶ್ಯಕತೆ ಇಲ್ಲ ಧೈರ್ಯವಾಗಿರಿ ಎಂದು ಪ್ರಚಾರ ಭಾಷಣದಲ್ಲಿ ಜಮೀರ್ ಅಹ್ಮದ್ ಹೇಳಿದರು.

