Dailyhunt Logo
  • Light mode
    Follow system
    Dark mode
    • Play Story
    • App Story

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಬಳಿಯ ತಮರವಾಡಿ ಗ್ರಾಮದ ಮೋಹನ್‌ ಕುಮಾರ್‌ ಹಾಗೂ ಮೈಸೂರಿನ ಜಯಪುರ ಬಳಿಯ ಕೆರೆಹಳ್ಳಿ ಗ್ರಾಮದ ರವಿಚಂದ್ರ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ.

ಇವರಿಬ್ಬರು ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಸಂಬಂಧ ಕೆಆರ್‌ಎಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Andolana