Dailyhunt

ಬಿ.ಆರ್.ಟಿ ವಲಯದಲ್ಲಿ ಮತ್ತೆ ಕಾಡ್ಗಿಚ್ಚು : 20 ಎಕರೆ ಅರಣ್ಯ ನಾಶ

ನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ ಹೆಚ್ಚು ಆರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.

ಗುರುವಾರ ಮಧ್ಯಾಹ್ನ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡು ನೋಡು ನೋಡುತ್ತಲೇ ಎಕರೆಗಟ್ಟಲೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ.

ಅರಣ್ಯಕ್ಕೆ ಬೆಂಕಿ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆ ವಲಯ ಅರಣ್ಯ ಅಧಿಕಾರಿ ವಾಸು ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ತ್ವರಿತವಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ವಾರ ಬಿ.ಆರ್.ಟಿ ವಲಯ ವ್ಯಾಪ್ತಿಯ ಬೈಲೂರು ಅರಣ್ಯ ಪ್ರದೇಶದಲ್ಲಿ 80 ಹೆಚ್ಚು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿತ್ತು.

ಇದೀಗ ಮತ್ತೆ ಬಿ.ಆರ್.ಟಿ ವಲಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇದು ಕಿಡಿಗೇಡಿಗಳು ಹಾಕಿರುವ ಬೆಂಕಿಯೋ ಅಥವಾ ಕಾಡ್ಗಿಚ್ಚಿಗೆ ಬಿದ್ದಿರುವ ಬೆಂಕಿಯೋ ಎಂಬ ಅನುಮಾನ ಕಾಡುತ್ತಿದೆ. ಒಟ್ಟಾರೆ ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯಕ್ಕೆ ಬೆಂಕಿ ಬೀಳದಂತೆ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Andolana