Dailyhunt Logo
  • Light mode
    Follow system
    Dark mode
    • Play Story
    • App Story

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ ಕಾಲ ಪ್ರತಿದಿನ 9 ಸಾವಿರ ಕ್ಯೂಸೆಕ್ಸ್ ನೀರಿನ ಹರಿವು ಖಚಿತಪಡಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಸೋಮವಾರ ಸೂಚಿಸಿದೆ.

ಆಗಸ್ಟ್ 25ರ ಬೆಳಗ್ಗೆ 8 ಗಂಟೆಯಿಂದ ಈ ಆದೇಶ ಜಾರಿಗೆ ಬರಲಿದೆ. ಈ ಮೂಲಕ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಸತತ ಮೂರನೇ ಬಾರಿ ನೀರು ಹರಿಸುವ ಸೂಚನೆ ಬಂದಂತಾಗಿದೆ. ಮೊದಲಿಗೆ 3 ಸಾವಿರ ಕ್ಯೂಸೆಕ್ಸ್, ಬಳಿಕ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸೂಚಿಸಲಾಗಿತ್ತು. ಇದೀಗ 12 ಸಾವಿರ ಕ್ಯೂಸೆಕ್ಸ್ ಆದೇಶವನ್ನು ಕಡಿಮೆ ಮಾಡಿ 9 ಸಾವಿರ ಕ್ಯೂಸೆಕ್ಸ್‌ಗೆ ನಿಗದಿಪಡಿಸಲಾಗಿದೆ.

15 ದಿನಕ್ಕೆ 11.66 ಟಿಎಂಸಿ ನೀರು ಸಿಡಬ್ಲ್ಯುಆರ್‌ಸಿ ನಿರ್ಧಾರದಂತೆ ಆಗಸ್ಟ್ 25ರಿಂದ ಮುಂದಿನ 15 ದಿನಗಳ ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಒಟ್ಟು ಸುಮಾರು 11.66 ಟಿಎಂಸಿ ನೀರು ಹರಿಯುವಂತೆ ಕರ್ನಾಟಕ ಖಚಿತಪಡಿಸಬೇಕಿದೆ.

ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳ ಮೇಲ್ಭಾಗದಲ್ಲಿರುವ ಕೇಂದ್ರಗಳ ಅಂಕಿ-ಅಂಶಗಳು ಹಾಗೂ ಮುಂದಿನ ಏಳು ದಿನಗಳ ಒಳಹರಿವಿನ ಮುನ್ಸೂಚನೆಗಳನ್ನು ಸಿಡಬ್ಲ್ಯುಆರ್‌ಸಿ ಪರಿಗಣಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Andolana