ಬೆಂಗಳೂರು : ಅಧಿಕ ಲಾಭದ ಆಮಿಷ ಒಡ್ಡಿ ಜನರಿಂದ ಲಕ್ಷಗಟ್ಟಲೆ ಹಣವನ್ನು ಪಡೆದು ವಂಚನೆ ನಡೆಸಿದ ಅನೇಕ ಪ್ರಕರಣಗಳು ಬೆಂಗಳೂರಿನಲ್ಲಿ ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿವೆ.
ಆದರೂ ಕೂಡ ಜನರು ಮೋಸ ಹೋಗುವುದು ನಿಂತಿಲ್ಲ. ವಂಚನೆ ಕಂಪನಿಗಳಿಗೆ ಕಡಿವಾಣ ಬಿದ್ದಿಲ್ಲ.
ಭಾರತದಿಂದ ಯುಎಇ ಪ್ರಯಾಣಕ್ಕೆ ಸೆ.12ರಿಂದ ಅವಕಾಶ - ಷರತ್ತುಬದ್ಧ ನಿಯಮ ಅನ್ವಯ..!
ಸೈಯದ್ ಗುಲಾಬ್ ಎಂಬುವವರು ದೂರು ಕೊಟ್ಟಿದ್ದರು. ಅದಾದ ಬಳಿಕ ತಿಲಕ್ ನಗರ ಠಾಣೆ ಪೊಲೀಸರು ಸಿಆರ್ಪಿಸಿ ಸೆಕ್ಷನ್ 91ರ ಅಡಿಯಲ್ಲಿ ಪಬ್ಲಿಕ್ ನೋಟೀಸ್ ಹೊರಡಿಸಿದರು. ಇಕ್ರಾ ಕಂಪನಿಯಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡು ವಂಚನೆಗೊಳಗಾದವರು ಠಾಣೆಗೆ ಬಂದು ಮಾಹಿತಿ ಕೊಡುವಂತೆ ನೋಟೀಸ್ನಲ್ಲಿ ಮನವಿ ಮಾಡಲಾಯಿತು. ಪೊಲೀಸ್ ಪ್ರಕಟಣೆ ಬಳಿಕ 24ಕ್ಕೂ ಹೆಚ್ಚು ಜನರು ದೂರು ನೀಡಲು ಮುಂದೆ ಬಂದರು. ಸದ್ಯ ಇರುವ ಮಾಹಿತಿ ಪ್ರಕಾರ 2020ರಿಂದಲೂ 40ಕ್ಕೂ ಹೆಚ್ಚು ಜನರು ಇಕ್ರಾ ಕಂಪನಿಗೆ ಹಣ ಕೊಟ್ಟಿದ್ದಾರೆ. ಒಬ್ಬೊಬ್ಬರಿಂದಲೂ 4-10 ಲಕ್ಷದವರೆಗೂ ಹಣ ಪಡೆಯಲಾಗಿದೆ. ತಿಲಕ್ ನಗರದ ನಿವಾಸಿಯೊಬ್ಬರು 10 ಲಕ್ಷ ಹಣ ಕಳೆದುಕೊಂಡಿದ್ಧಾರೆ. ಮಹಾರಾಷ್ಟ್ರದ ನಾಗಪುರ ಮೂಲದ ಐದಾರು ಮಂದಿಗೆ ಲಕ್ಷಾಂತರ ರೂ ವಂಚನೆಯಾಗಿರುವುದು ತಿಳಿದುಬಂದಿದೆ. ಪೊಲೀಸರು ಸದ್ಯ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ಧಾರೆ.
Post navigation
ಭಾರತದಿಂದ ಯುಎಇ ಪ್ರಯಾಣಕ್ಕೆ ಸೆ.12ರಿಂದ ಅವಕಾಶ - ಷರತ್ತುಬದ್ಧ ನಿಯಮ ಅನ್ವಯ..! ವಿಜಯಪುರ ನಗರದಲ್ಲಿ ಮತ್ತೆ ಭೂ ಕಂಪನದ ಅನುಭವ..!
