ರಾಜ್ಯ ಸುದ್ದಿ
ರಾಜ್ಯದಲ್ಲಿ ಮುಂದಿನ ತಿಂಗಳು ಕೊವಿಡ್ ಮೂರನೇ ಅಲೆ ಭೀತಿ; ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ!
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಕೇಸುಗಳ ಸಂಖ್ಯೆ ಕೊಂಚ ಕಡಿಮೆಯಾಗುತ್ತಿದೆ. ಕಳೆದೊಂದು ವಾರದಿಂದ ಕೊವಿಡ್ ಕೇಸುಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂವನ್ನು ಕೂಡ ತೆರವುಗೊಳಿಸಲಾಗಿದೆ. ಆದರೂ ಮುಂದಿನ ತಿಂಗಳು ಅಂದರೆ ಅಕ್ಟೋಬರ್ನಲ್ಲಿ ಕರ್ನಾಟಕದಲ್ಲಿ ಕೊವಿಡ್ ಮೂರನೇ ಅಲೆ ಶುರುವಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ (TAC) ಎಚ್ಚರಿಕೆ ನೀಡಿದೆ.
ಕರ್ನಾಟಕದಲ್ಲಿ ಅಕ್ಟೋಬರ್- ನವೆಂಬರ್ ತಿಂಗಳಲ್ಲಿ ಕೊರೊನಾ ಮೂರನೇ ಅಲೆ ವಿಪರೀತವಾಗಲಿದೆ ಎಂದು ತಿಳಿಸಿರುವ ತಾಂತ್ರಿ ಸಲಹಾ ಸಮಿತಿ ಕರ್ನಾಟಕದಲ್ಲಿ ಕೊವಿಡ್ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. ಒಂದುವೇಳೆ ರಾಜ್ಯದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಸರಿಯಾಗಿ ಜಾರಿಗೆ ತರದಿದ್ದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದೆ.
ಮೈಸೂರಿನಲ್ಲಿ 101 ಗಣಪತಿ ದೇವಸ್ಥಾನ ತೆರವು : ಪ್ರತಾಪ್ ಸಿಂಹ ತೀವ್ರ ಆಕ್ರೋಶ!
ಈ ತಿಂಗಳಿನಿಂದ ಸಾಲು-ಸಾಲು ಹಬ್ಬಗಳು ಇರುವುದರಿಂದ ಕೊರೊನಾ ಮಾರ್ಗಸೂಚಿಗಳನ್ನು ಕಠಿಣಗೊಳಿಸದಿದ್ದರೆ ಮುಂದಿನ ತಿಂಗಳ ವೇಳೆಗೆ ಕೊರೊನಾ ಕೇಸುಗಳು ಮತ್ತೆ ಹೆಚ್ಚಾಗಲಿದೆ ಎಂದು ಟಿಎಸಿ ಹೇಳಿದೆ.
ಈ ಹಂತದಲ್ಲಿ ಕೊವಿಡ್ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುವುದು ಬಹಳ ಮುಖ್ಯ. ಹಬ್ಬಗಳ ದಿನಗಳಲ್ಲಿ ಹೆಚ್ಚಿನ ಜನರು ಸೇರದಂತೆ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಈಗಾಗಲೇ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದೆ. ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಅತಿ ಹೆಚ್ಚು ಪರಿಣಾಮ ಬೀರಲಿದೆ ಎಂದು ಈಗಾಗಲೇ ತಜ್ಞರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಟಿಎಸಿ ತಿಳಿಸಿದೆ.
ಈ ವರ್ಷ ಮತ್ತೆ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಕಳೆದ ಏಪ್ರಿಲ್ ತಿಂಗಳಿಂದ ಕರ್ನಾಟಕದಲ್ಲಿ ಕೊರೊನಾ ಕೇಸುಗಳು ಕೊಂಚ ನಿಯಂತ್ರಣಕ್ಕೆ ಬರುತ್ತಿವೆ. ಇದೀಗ ಹಬ್ಬದ ನೆಪದಲ್ಲಿ ಜನರು ಮತ್ತೆ ಕೊರೊನಾ ನಿಯಮಾವಳಿಗಳನ್ನು ಗಾಳಿಗೆ ತೂರಿದರೆ ಕರ್ನಾಟಕದಲ್ಲಿ ಕೊವಿಡ್ ಮೂರನೇ ಅಲೆ ವಿಪರೀತಕ್ಕೆ ಹೋಗಲಿದೆ ಎಂದು ಟಿಎಸಿ ಅಭಿಪ್ರಾಯಪಟ್ಟಿದೆ.
ಕರ್ನಾಟಕದಲ್ಲಿ ವಿಪರೀತ ಮಳೆಯೂ ಆಗುತ್ತಿರುವುದರಿಂದ ಈ ತಿಂಗಳು ಮಳೆ, ಚಳಿಯಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ. ಎರಡು ಡೋಸ್ ಕೊರೊನಾ ಲಸಿಕೆ ಪಡೆದವರಿಗೂ ಸೋಂಕು ಕಂಡುಬರುತ್ತಿದೆ. ಒಂದು ತಿಂಗಳಲ್ಲಿ ಮಂಗಳೂರು, ಬೆಂಗಳೂರು, ಕೋಲಾರ, ಮೈಸೂರಿನ ಅಪಾರ್ಟ್ಮೆಂಟ್ಗಳು, ನರ್ಸಿಂಗ್ ಹಾಸ್ಟೆಲ್ಗಳಲ್ಲಿ ಕೊವಿಡ್ ಕೇಸುಗಳು ಹೆಚ್ಚಾಗಿ ವರದಿಯಾಗುತ್ತಿದೆ. ಇದೇ ರೀತಿ ಪರಿಸ್ಥಿತಿಯಿಂದಲೇ ರಾಜ್ಯದಲ್ಲಿ 2ನೇ ಅಲೆ ತಾರಕಕ್ಕೆ ಏರಿತು ಎಂಬುದನ್ನು ನಾವು ಮರೆಯಬಾರದು. ಇದೀಗ ಮತ್ತೆ ಅದೇ ತಪ್ಪು ಮಾಡಿದರೆ 3ನೇ ಅಲೆಯ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ತಾಂತ್ರಿ ಸಲಹಾ ಸಮಿತಿ ಎಚ್ಚರಿಸಿದೆ.
ಕೊರೊನಾ ಮೂರನೇ ಅಲೆ ಮಕ್ಕಳಿಗೆ ಕಂಟಕವಾಗುವ ಸಾಧ್ಯತೆ ಇದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಸೋಂಕು ಹರಡಲಿದೆ ಎನ್ನಲಾಗಿದೆ. ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕಿತರಾದ ಮಕ್ಕಳ ಸಂಖ್ಯೆಗಿಂತಲೂ 7 ಪಟ್ಟು ಈ ಬಾರಿ ಸೋಂಕಿತರ ಮಕ್ಕಳ ಪ್ರಮಾಣ ಹೆಚ್ಚಾಗಲಿದೆ ಎಂದು ತಜ್ಞರು ಸುಳಿವು ನೀಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ನಿನ್ನೆ ಹೊಸದಾಗಿ 801 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,60,932 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,06,746 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕಿನಿಂದ 15 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,487 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 207 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,41,170 ಕ್ಕೆ ಏರಿಕೆಯಾಗಿದೆ. 12,41,170 ಸೋಂಕಿತರ ಪೈಕಿ 12,17,893 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾದಿಂದ ಈವರೆಗೆ 16,047 ಜನರು ಸಾವನ್ನಪ್ಪಿದ್ದಾರೆ.
Post navigation
ಮೈಸೂರಿನಲ್ಲಿ 101 ಗಣಪತಿ ದೇವಸ್ಥಾನ ತೆರವು : ಪ್ರತಾಪ್ ಸಿಂಹ ತೀವ್ರ ಆಕ್ರೋಶ! ನವದೆಹಲಿ : ಭಾರೀ ಮಳೆಯ ನಡುವೆಯೇ ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ!related stories
-
Breaking Karnataka ಮುಂಗಾರಿನಲ್ಲಿ ಮಳೆ ಅಬ್ಬರ ಜೋರಾಗಿದ್ದರೂ ವಾಡಿಕೆಗಿಂತ ಶೇ.8ರಷ್ಟು ಕಡಿಮೆ ಮಳೆ
-
ಇತ್ತೀಚಿನ ಸುದ್ದಿ ಮಳೆಗೆ ಕೆಂಪೇಗೌಡ ಪಾರ್ಕ್ ನಲ್ಲಿ ಕೋಟೆಯ ಪಶ್ಚಿಮ ದಿಕ್ಕಿನ ಗೋಡೆ ಕುಸಿತ
-
ಇತ್ತೀಚಿನ ಸುದ್ದಿ ವಾಯುಭಾರ ಕುಸಿತದ ಮುಂದುವರೆದ ಎಫೆಕ್ಟ್: ಇಂದು ಮತ್ತು ನಾಳೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್