Dailyhunt
ಇಂದಿನ ವಚನ: -ಸಂಗಮೇಶ್ವರದ ಅಪ್ಪಣ್ಣ!

ಇಂದಿನ ವಚನ: -ಸಂಗಮೇಶ್ವರದ ಅಪ್ಪಣ್ಣ!

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ

ವಚನ:

ತಿಥಿವಾರವೆಂದರಿಯೆನಯ್ಯಾ, ಲಗ್ನವಿಲಗ್ನವೆಂದರಿಯೆನಯ್ಯಾ.

ಇದನರಿತು ಹದಿನಾರು ವಾರ, ಹದಿನೆಂಟು ಕುಲವೆಂದೆಂಬರು.

ನಾವಿದನರಿಯೆವಯ್ಯಾ, ಇರುಳೊಂದು ವಾರ, ಹಗಲೊಂದು ವಾರ.

ಭವಿಯೊಂದು ಕುಲ, ಭಕ್ತನೊಂದು ಕುಲ, ನಾವು ಬಲ್ಲುದು ಇದು ತಾನೆ,ಬಸವಪ್ರಿಯ ಕೂಡಲಚೆನ್ನಸಂಗಮದೇವಾ.

-ಸಂಗಮೇಶ್ವರದ ಅಪ್ಪಣ್ಣ

Dailyhunt
Disclaimer: This content has not been generated, created or edited by Dailyhunt. Publisher: BC Suddi