Dailyhunt
ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಎನ್‍ಐಎ ಎಂಟ್ರಿ..!

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಎನ್‍ಐಎ ಎಂಟ್ರಿ..!

ಈ ಸಂಜೆ 5 years ago

ಬೆಂಗಳೂರು, ಸೆ.21- ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಧಿಕೃತವಾಗಿ ಎನ್‍ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ)ಪ್ರವೇಶ ಕೊಟ್ಟಿದ್ದು, ಗಲಭೆ ಬಗ್ಗೆ ಮಾಹಿತಿ ಕಲೆ ಹಾಕಿದೆ.

ಗಲಭೆಯಲ್ಲಿ ಸಾವನ್ನಪ್ಪಿದ ಮೂವರು ವ್ಯಕ್ತಿಗಳ ಪ್ರಕರಣ ಹಾಗೂ ಮೃತರ ಹಿನ್ನೆಲೆ, ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ ಇಟ್ಟ ಆರೋಪಿಗಳ ಹಿನ್ನೆಲೆ, ಹಾಗೆ ಈಗಾಗಲೇ ಬಂಧಿತರಾಗಿರುವ ಎಸ್‍ಡಿಪಿಐ ಸಂಘಟನೆ ಸದಸ್ಯರ ಮಾಹಿತಿ ಕಲೆ ಹಾಕಿ ಎನ್‍ಐಎ ತನಿಖೆ ನಡೆಸುತ್ತಿದೆ.

ಸದ್ಯ ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳಿಂದ ಕೂಡ ಎನ್‍ಐಎ ಬಹುತೇಕ ಮಾಹಿತಿ ಪಡೆದಿದೆ. ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಹಾಗೂ ಡಿ.ಜೆ.

ಹಳ್ಳಿ ಪೊಲೀಸರು ಆರೋಪಿಗಳ ಪ್ರಾಥಮಿಕ ಮಾಹಿತಿಯನ್ನು ಎನ್‍ಐಎಗೆ ನೀಡಿದ್ದಾರೆ. ಪ್ರಕರಣದ ಹಿಂದೆ ಎಸ್‍ಡಿಪಿಐನ ಕೆಲ ಕಾರ್ಯಕರ್ತರು, ಪ್ರಮುಖರು ಇದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಭಯೋತ್ಪಾದಕರ ನಂಟಿನ ಬಗ್ಗೆ ಎನ್‍ಐಎ ಮಾಹಿತಿ ಕಲೆ ಹಾಕುತ್ತಿದೆ.

ಎನ್‍ಐಎ ಗಲಭೆ ವೇಳೆ ನಡೆದ ಕೆಲ ಸಿಸಿಟಿವಿಗಳ ಪರಿಶೀಲನೆ ಮಾಡಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ 380ಕ್ಕೂ ಹೆಚ್ಚು ಜನ ಬಂಧಿತರಾಗಿದ್ದು, ಪ್ರತಿಯೊಬ್ಬರ ಹಿನ್ನೆಲೆ ಕಲೆ ಹಾಕಲಾಗಿದೆ. ಇಷ್ಟು ದಿನ ಸಿಸಿಬಿ ಮಾತ್ರ ಪ್ರಕರಣದ ತನಿಖೆ ನಡೆಸುತ್ತಿತ್ತು.

ಆದರೆ, ಇನ್ಮುಂದೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಿಗೆ ಎನ್‍ಐಎ ಆತಂಕ ಎದುರಾಗಿದೆ. ಹಾಗೆ ಮಾಜಿ ಮೇಯರ್ ಸಂಪತ್ ರಾಜ್ ಸದ್ಯ ತನಗೆ ಕೊರೊನಾ ಇದೆ ಎಂಬ ಸಂದೇಶ ರವಾನಿಸಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ, ಘಟನೆಯಲ್ಲಿ ಇವರ ಪಾತ್ರ ಪ್ರಮುಖವಾಗಿರುವ ಕಾರಣ ಸಿಸಿಬಿ ಪೊಲೀಸರು ಕೊರೊನಾದಿಂದ ಸಂಪತ್‍ರಾಜ್ ಚೇತರಿಸಿಕೊಂಡ ತಕ್ಷಣ ವಿಚಾರಣೆಗೆ ಒಳಪಡಿಸಲಿದ್ದಾರೆ. ಹಾಗೆ ಇವರ ಹೇಳಿಕೆಯಾಧಾರದ ಮೇರೆಗೆ ಎನ್‍ಐಎ ಅವಶ್ಯಕತೆ ಬಿದ್ದರೆ ಸಂಪತ್ ರಾಜ್ ಅವರ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Dailyhunt
Disclaimer: This content has not been generated, created or edited by Dailyhunt. Publisher: eesanje