Dailyhunt Logo
  • Light mode
    Follow system
    Dark mode
    • Play Story
    • App Story
ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಬಿ.ಸಿ. ಖಂಡೂರಿ ನಿಧನ

ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಬಿ.ಸಿ. ಖಂಡೂರಿ ನಿಧನ

GK KANNADA 6 days ago

Share With Friends

ತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಭುವನ್ ಚಂದ್ರ ಖಂಡೂರಿ (B. C. Khanduri ) ಅವರು 2026ರ ಮೇ 19ರಂದು ದೆಹ್ರಾಡೂನ್‌ನಲ್ಲಿ 91ನೇ ವಯಸ್ಸಿನಲ್ಲಿ ನಿಧನರಾದರು. ಅವರು ಭಾರತೀಯ ಸೇನೆಯಲ್ಲಿ ಮೇಜರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ ನಂತರ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದರು.

ಖಂಡೂರಿ ಅವರು 2007ರಿಂದ 2009ರವರೆಗೆ ಹಾಗೂ 2011ರಿಂದ 2012ರವರೆಗೆ ಎರಡು ಬಾರಿ ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಗೋಲ್ಡನ್ ಕ್ವಾಡ್ರಿಲ್ಯಾಟರಲ್ ಯೋಜನೆಗಳ ಅನುಷ್ಠಾನದಲ್ಲಿ ಅವರ ಕೊಡುಗೆ ಮಹತ್ವದ್ದಾಗಿದೆ.

ಸೇನಾ ಹಿನ್ನೆಲೆ, ಆಡಳಿತಾತ್ಮಕ ಅನುಭವ ಮತ್ತು ಅಭಿವೃದ್ಧಿ ಪರ ದೃಷ್ಟಿಕೋನದಿಂದ ಅವರು ಉತ್ತರಾಖಂಡದ ಜನಪ್ರಿಯ ನಾಯಕರಲ್ಲಿ ಒಬ್ಬರಾಗಿದ್ದರು.

ಪ್ರಮುಖ ರಾಜಕೀಯ ಹುದ್ದೆಗಳು :
*1991ರಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶದ ಗಢ್ವಾಲ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು.
*ನಂತರ 1996, 1998, 1999, 2004, 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲೂ ಗೆಲುವು ಸಾಧಿಸಿದರು.
*ಮಾಜಿ ಪ್ರಧಾನಿ Atal Bihari Vajpayee ಅವರ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾಗಿ ಕಾರ್ಯನಿರ್ವಹಿಸಿದರು.
*ದೇಶದ ಹೆದ್ದಾರಿ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ.

2007ರಿಂದ 2009ರವರೆಗೆ ಮೊದಲ ಬಾರಿ ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.
*2011ರಿಂದ 2012ರವರೆಗೆ ಎರಡನೇ ಬಾರಿ ಮುಖ್ಯಮಂತ್ರಿಯಾದರು.
ಅವರ ಆಡಳಿತದಲ್ಲಿ ಪಾರದರ್ಶಕತೆ, ಶಿಸ್ತು ಮತ್ತು ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಯಿತು.
*ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಕಾರ್ಯನಿರ್ವಹಿಸಿದರು.
*ಉತ್ತರಾಖಂಡದಲ್ಲಿ ಬಿಜೆಪಿ ಬಲವರ್ಧನೆಗೆ ಪ್ರಮುಖ ಪಾತ್ರ ವಹಿಸಿದರು.
*ಸ್ವಚ್ಛ ಹಾಗೂ ಪ್ರಾಮಾಣಿಕ ರಾಜಕಾರಣಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.


Dailyhunt
Disclaimer: This content has not been generated, created or edited by Dailyhunt. Publisher: Spardha Times