Dailyhunt
ಬೇವಿನಮಟ್ಟಿ ಗ್ರಾಮದಲ್ಲಿ ಮುಖಂಡರೊಂದಿಗೆ ಸಚಿವ ಶಿವಾನಂದ ಪಾಟೀಲ್ ಸಭೆ

ಬೇವಿನಮಟ್ಟಿ ಗ್ರಾಮದಲ್ಲಿ ಮುಖಂಡರೊಂದಿಗೆ ಸಚಿವ ಶಿವಾನಂದ ಪಾಟೀಲ್ ಸಭೆ

ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) :

ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಯುಕ್ತ ಬೇವಿನಮಟ್ಟಿ ಗ್ರಾಮದಲ್ಲಿ ಸಚಿವ ಶಿವಾನಂದ ಪಾಟೀಲ್ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ ಗ್ರಾಮದ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಯಿತು.

ಸ್ಥಳೀಯರ ಅಭಿಪ್ರಾಯಗಳು ಮತ್ತು ಸಲಹೆಗಳು ಅಭಿವೃದ್ಧಿಗೆ ಸಹಕಾರಿಯಾಗಲಿವೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗಡಿ ಪ್ರದೇಶಾಭಿವೃದ್ಧಿ ಅಧ್ಯಕ್ಷ ಸೋಮಣ್ಣ ಬೇವಿನಮರದ, ಸ್ಥಳೀಯ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada