Dailyhunt Logo
  • Light mode
    Follow system
    Dark mode
    • Play Story
    • App Story
ಭಾನುವಾರದ ಸರ್ವಪಕ್ಷ ಸಭೆಯತ್ತ ಎಲ್ಲರ ಚಿತ್ತ, ಅಲ್ಲಿಯವರೆಗೆ ನೀರು ಹರಿಸಲ್ಲ ಎಂದ ಸಚಿವ ರಾಮಲಿಂಗಾ ರೆಡ್ಡಿ

ಭಾನುವಾರದ ಸರ್ವಪಕ್ಷ ಸಭೆಯತ್ತ ಎಲ್ಲರ ಚಿತ್ತ, ಅಲ್ಲಿಯವರೆಗೆ ನೀರು ಹರಿಸಲ್ಲ ಎಂದ ಸಚಿವ ರಾಮಲಿಂಗಾ ರೆಡ್ಡಿ

Hosadigantha 2 weeks ago

ಹೊದಿಗಂತ ಡಿಜಿಟಲ್‌ ಡೆಸ್ಕ್:‌

ಭಾನುವಾರ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವವರೆಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್‌ನಂತೆ ಒಟ್ಟು ಸುಮಾರು 4 ಟಿಎಂಸಿ ನೀರನ್ನು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಇತ್ತೀಚಿನ ಆದೇಶಕ್ಕೆ ತೀವ್ರ ಪ್ರತಿಕ್ರಿಯೆ ನೀಡಿದರು.

ರೈತರ ಬೆಳೆಗಳಿಗೆ ನೀರಿಲ್ಲ:

ರಾಜ್ಯದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವರು, ಸದ್ಯಕ್ಕೆ ನಮಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಿಲ್ಲ. ಆದರೆ, ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, ಜಲಾಶಯಗಳಲ್ಲಿ ನೀರಿನ ತೀವ್ರ ಕೊರತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮದೇ ರಾಜ್ಯದ ರೈತರಿಗೆ ಬೆಳೆ ಬೆಳೆಯಲು ನೀರು ಕೊಡಲು ನಮಗೆ ಸಾಧ್ಯವಾಗುತ್ತಿಲ್ಲ. ಹೀಗಿರುವಾಗ ತಮಿಳುನಾಡಿಗೆ ನೀರು ಬಿಡುವುದು ಹೇಗೆ? ಎಂದು ಪ್ರಶ್ನಿಸಿದರು.

ಹಿರಿಯ ನಾಗರಿಕರಿಗೆ ವರವಾದ ಶ್ರೀ ಭಾರತೀತೀರ್ಥ ಮಹಾಸ್ವಾಮಿಜಿ ಮೊಬೈಲ್‌ ಆಸ್ಪತ್ರೆ!

ಭಾನುವಾರ ಸರ್ವಪಕ್ಷ ಸಭೆ:

CWMA ಆದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಭಾನುವಾರ ತುರ್ತು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಕಳೆದ 30 ವರ್ಷಗಳಿಂದ ಕಾವೇರಿ ಪರವಾಗಿ ವಾದ ಮಂಡಿಸುತ್ತಿರುವ ಕಾನೂನು ತಜ್ಞರೇ ಈಗಲೂ ನಮ್ಮ ಪರ ವಾದ ಮಾಡುತ್ತಿದ್ದಾರೆ. ಭಾನುವಾರದ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ಮತ್ತು ತಜ್ಞರ ಮಹತ್ವದ ಸಲಹೆಗಳನ್ನು ಪಡೆದು ಮುಂದಿನ ಕಾನೂನಾತ್ಮಕ ಹೆಜ್ಜೆಯನ್ನು ಇಡಲಿದ್ದೇವೆ. ಅಲ್ಲಿಯವರೆಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಕಟ್ಟುನಿಟ್ಟಾಗಿ ಹೇಳಿದರು.

CWRC ಶಿಫಾರಸನ್ನು ಎತ್ತಿಹಿಡಿದಿದ್ದ CWMA ಆದೇಶದಿಂದ ಕಾವೇರಿ ಕೊಳ್ಳದ ರೈತರಲ್ಲಿ ತೀವ್ರ ಆತಂಕ ಮೂಡಿತ್ತು. ಆದರೆ, ರಾಜ್ಯ ಸರ್ಕಾರವು ಭಾನುವಾರದವರೆಗೆ ನೀರು ಬಿಡದಿರಲು ಕಠಿಣ ತೀರ್ಮಾನ ಕೈಗೊಂಡಿರುವುದು ಸದ್ಯಕ್ಕೆ ಕನ್ನಡಿಗರಿಗೆ ನಿರಾಳತೆ ತಂದಿದೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha