Dailyhunt Logo
  • Light mode
    Follow system
    Dark mode
    • Play Story
    • App Story
'ಹರ್ ಘರ್ ತಿರಂಗಾ' ಅಭಿಯಾನಕ್ಕೆ ರಾಜ್ಯ ಸಂಚಾಲಕಿಯಾಗಿ ರೂಪಾಲಿ ಎಸ್.ನಾಯ್ಕ ನೇಮಕ

'ಹರ್ ಘರ್ ತಿರಂಗಾ' ಅಭಿಯಾನಕ್ಕೆ ರಾಜ್ಯ ಸಂಚಾಲಕಿಯಾಗಿ ರೂಪಾಲಿ ಎಸ್.ನಾಯ್ಕ ನೇಮಕ

Hosadigantha 2 weeks ago

ಹೊಸದಿಗಂತ ವರದಿ ಕಾರವಾರ:

ದೇಶಭಕ್ತಿ ಮತ್ತು ರಾಷ್ಟ್ರಾಭಿಮಾನದ ಸಂದೇಶ ಸಾರುವ ಭಾರತೀಯ ಜನತಾ ಪಕ್ಷದ 'ಹರ್ ಘರ್ ತಿರಂಗಾ' ಅಭಿಯಾನಕ್ಕೆ ಕರ್ನಾಟಕದಲ್ಲಿ ವೇಗ ನೀಡಲು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರನ್ನು ರಾಜ್ಯ ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ.

ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ರೂಪಾಲಿ ಎಸ್.ನಾಯ್ಕ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಿದ್ದು, ಈ ಸಮಿತಿಯಲ್ಲಿ ಶಾಸಕರಾದ ಹರೀಶ್ ಪೂಂಜಾ, ಬಸವರಾಜ್ ಹಾಗೂ ಲಿಂಗರಾಜ್ ಪಾಟೀಲ್ ಸಹ ಸಂಚಾಲಕರಾಗಿದ್ದಾರೆ.

ಸಂಚಾಲಕಿಯಾಗಿ ನೇಮಕಗೊಂಡ ತರುವಾಯ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಲು ರೂಪಾಲಿ ಎಸ್.ನಾಯ್ಕ ಚುರುಕಿನಿಂದ ಕಾರ್ಯೋನ್ಮುಖರಾಗಿದ್ದಾರೆ. ಈಗಾಗಲೆ ಕೆಲವೆಡೆ ಸಭೆಗಳನ್ನೂ ನಡೆಸಿದ್ದಾರೆ.

ದೇಹ, ಮನಸ್ಸು, ಆತ್ಮದ ಸಮತೋಲನವೇ ಮನುಷ್ಯನ ನಿಜವಾದ ಆರೋಗ್ಯ: ರಾಘವೇಶ್ವರ ಶ್ರೀ

ಮನೆಮನೆಗೂ ರಾಷ್ಟ್ರಧ್ವಜ ತಲುಪಿಸುವುದು, ಸಾರ್ವಜನಿಕರಲ್ಲಿ ರಾಷ್ಟ್ರಧ್ವಜದ ಮಹತ್ವದ ಕುರಿತು ಅರಿವು ಮೂಡಿಸುವುದು, ಯುವಜನರು ಮತ್ತು ಮಹಿಳೆಯರನ್ನು ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವುದು, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹರ್ ಘರ್ ತಿರಂಗಾ ಅಭಿಯಾನದಲ್ಲಿ ನಡೆಸಲಾಗುತ್ತದೆ. 'ಹರ್ ಘರ್ ತಿರಂಗಾ' ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುವ ಹಾಗೂ ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ದೇಶಭಕ್ತಿಯ ಸಂದೇಶವನ್ನು ಜನರಿಗೆ ತಲುಪಿಸುವ ಅಭಿಯಾನವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha