Kannada News Now

1.8M Followers

ರಾಜ್ಯದ ಪಿಂಚಣಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

25 Aug 2020.05:57 AM

ಬೆಂಗಳೂರು : ಇತ್ತೀಚಿಗೆ ನಡೆದ ರಾಷ್ಟ್ರಮಟ್ಟದ ಬ್ಯಾಂಕುಗಳ ವಿಲೀನದ ನಂತರ ಹಲವು ಬ್ಯಾಂಕುಗಳು ಸೇರಿ ಒಂದು ಬ್ಯಾಂಕ್ ಆಗಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಇನ್ನೂ ಮುಂದೆ ತಮ್ಮ ಪಿಂಚಣಿಗಳನ್ನು ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖಾಂತರ ಪಡೆಯಬಹುದು ಎಂದು ಪಿಂಚಣಿ ಬಟವಾಡೆ ಖಜಾನೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರು ಆಗಸ್ಟ್ 2020 ರಿಂದ ಮಾಹೆಯಿಂದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಿಂಚಣಿಯನ್ನು ಪಡೆಯಬಹುದಾಗಿದೆ. ಎಸ್.ಬಿ.ಐ, ಕೆನರಾಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್‍ನಲ್ಲಿ ಖಾತೆ ಹೊಂದಿದವರು ಕೆನರಾ ಬ್ಯಾಂಕ್‍ನಿಂದ ಪಡೆಯಬಹುದಾಗಿದೆ.

ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದವರು ಬ್ಯಾಂಕ್ ಆಫ್ ಬರೋಡದಲ್ಲಿ ಪಡೆಯಬಹುದು. ಕಾರ್ಪೊರೇಷನ್ ಬ್ಯಾಂಕ್ ಹಾಗೂ ಆಂಧ್ರ ಬ್ಯಾಂಕ್‍ನಲ್ಲಿ ಪಿಂಚಣಿ ಪಡೆಯುತ್ತಿರುವವರು ಯುನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಾತ್ರ ಪಿಂಚಣಿ ಸೌಲಭ್ಯ ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags