ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಭಯೋತ್ಪಾದನಾ ಜಾಲಗಳನ್ನು ಮಟ್ಟಹಾಕಲು ರಾಷ್ಟ್ರೀಯ ತನಿಖಾ ದಳ (NIA) ಇಂದು ಮುಂಜಾನೆಯಿಂದಲೇ ಭಾರಿ ಕಾರ್ಯಾಚರಣೆ ಕೈಗೊಂಡಿದೆ.
ಭಯೋತ್ಪಾದನಾ ಪಿತೂರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳ ಒಟ್ಟು 22ಕ್ಕೂ ಹೆಚ್ಚು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ, ತೀವ್ರ ಶೋಧ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶ, ಆಂಧ್ರಪ್ರದೇಶ, ಮಹಾರಾಷ್ಟ್ರ, ದೆಹಲಿ, ಬಿಹಾರ, ರಾಜಸ್ಥಾನ, ಕರ್ನಾಟಕ, ಗುಜರಾತ್, ತೆಲಂಗಾಣ, ಪಶ್ಚಿಮ ಬಂಗಾಳ ಸೇರಿದಂತೆ ಒಂಭತ್ತು ರಾಜ್ಯಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

