ಬೆಂಗಳೂರು: ರಾಮನಗರದಲ್ಲಿ ಕಲ್ಯಾಣ ಮಂಟಪದಲ್ಲಿ ಜನರನ್ನು ಕೂರಿಸಿ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಇದು ಹೆಚ್.ಡಿ.
ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ವೈಯಕ್ತಿಕ ಹೋರಾಟವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. SIR ಪ್ರಕ್ರಿಯೆಗೆ ನಿರ್ದಿಷ್ಟ ನಿಯಮಗಳು ಮತ್ತು ಮಾರ್ಗಸೂಚಿಗಳಿವೆ. ಅವುಗಳ ಪ್ರಕಾರವೇ ಕಾರ್ಯನಿರ್ವಹಿಸಬೇಕು. ಮನೆ ಮನೆಗೆ ಹೋಗಿ ಮಾಹಿತಿ ಸಂಗ್ರಹಿಸುವುದನ್ನು ಬಿಟ್ಟು, ಸಮುದಾಯ ಭವನಗಳಲ್ಲಿ ಪ್ರಕ್ರಿಯೆ ನಡೆಸಲಾಗುತ್ತಿದ್ದರೆ, ಅದು ನಿಯಮ ಉಲ್ಲಂಘನೆಯಾಗಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಪ್ರತಿಯೊಂದು ಕಾರ್ಯವೂ ಸಂವಿಧಾನಬದ್ಧವಾಗಿ ನಡೆಯಬೇಕು ಎಂದು ಹೇಳಿದರು.
ಮುಖ್ಯಮಂತ್ರಿಗಳು ರಾಜ್ಯದ ಪ್ರತಿ ಬೂತ್ಗಳನ್ನು ವೈಯಕ್ತಿಕವಾಗಿ ಪರಿಶೀಲಿಸಲು ಸಾಧ್ಯವಿಲ್ಲ. ಸ್ಥಳೀಯ ನಾಯಕರು ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಉದ್ದೇಶದಿಂದ ಈ ರೀತಿ ಮಾಡಿರಬಹುದು ಎಂದರು.
ಚುನಾವಣಾ ಆಯೋಗವು ಈ ವಿಷಯವನ್ನು ಗಮನಿಸುತ್ತದೆ ಎಂದು ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಾವು ಆಯೋಗಕ್ಕೆ ಕೇಳಿದ 12 ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ, ಆ ಬಗ್ಗೆಯೂ ವಿಕಪಕ್ಷಗಳು ಮಾತನಾಡಲಿ ಎಂದು ಹೇಳಿದರು.

