Dailyhunt Logo
  • Light mode
    Follow system
    Dark mode
    • Play Story
    • App Story
ಸಂಸದ ಬಿ.ವೈ. ರಾಘವೇಂದ್ರ ನಿವಾಸಕ್ಕೆ ಶ್ರೀಲಂಕಾ ಸಂಸದ ಶ್ರೀಧರನ್ ಶಿವಜ್ಞಾನಂ ಭೇಟಿ

ಸಂಸದ ಬಿ.ವೈ. ರಾಘವೇಂದ್ರ ನಿವಾಸಕ್ಕೆ ಶ್ರೀಲಂಕಾ ಸಂಸದ ಶ್ರೀಧರನ್ ಶಿವಜ್ಞಾನಂ ಭೇಟಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸಕ್ಕೆ ಶ್ರೀಲಂಕಾ ದೇಶದ ಜಾಫ್ನಾ ಮತ್ತು ಕಿಲಿನೊಚ್ಚಿ ಚುನಾವಣಾ ಜಿಲ್ಲೆಯ ಸಂಸದ ಶ್ರೀಧರನ್ ಶಿವಜ್ಞಾನಂ (Shritharan Sivagnanam) ಅವರು ತಮ್ಮ ಪ್ರಮುಖರ ನಿಯೋಗದೊಂದಿಗೆ ಆತ್ಮೀಯವಾಗಿ ಭೇಟಿ ನೀಡಿದ್ದರು.

ಈ ಸೌಹಾರ್ದಯುತ ಭೇಟಿಯ ಸಂದರ್ಭದಲ್ಲಿ, ಅವರನ್ನು ಅತ್ಯಂತ ಗೌರವಪೂರ್ವಕವಾಗಿ ಬರಮಾಡಿಕೊಂಡು ಮಲೆನಾಡಿನ ಸಂಪ್ರದಾಯದಂತೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಭಾರತ ಮತ್ತು ಶ್ರೀಲಂಕಾ ದೇಶಗಳ ನಡುವಿನ ಸುದೀರ್ಘ ಸಾಂಸ್ಕೃತಿಕ ಬಾಂಧವ್ಯ, ಉಭಯ ದೇಶಗಳ ಪ್ರಚಲಿತ ರಾಜಕೀಯ ಹಾಗೂ ಪ್ರಾದೇಶಿಕ ಅಭಿವೃದ್ಧಿ ವಿದ್ಯಮಾನಗಳು ಸೇರಿದಂತೆ ವಿವಿಧ ಆಸಕ್ತಿದಾಯಕ ವಿಷಯಗಳ ಕುರಿತು ಅತ್ಯಂತ ಸೌಹಾರ್ದಯುತವಾಗಿ ಸುದೀರ್ಘ ಚರ್ಚೆ ನಡೆಸಲಾಯಿತು.

ಮಲೆನಾಡಿನ ಕೃಷಿ ಪದ್ಧತಿ, ಪ್ರವಾಸೋದ್ಯಮ ಹಾಗೂ ಇತಿಹಾಸದ ಬಗ್ಗೆ ಅವರು ಅಪಾರ ಆಸಕ್ತಿ ವ್ಯಕ್ತಪಡಿಸಿದ್ದು, ಈ ಅಂತರರಾಷ್ಟ್ರೀಯ ಭೇಟಿ ಅತ್ಯಂತ ಅರ್ಥಪೂರ್ಣ ಮತ್ತು ಸ್ಮರಣೀಯವಾಗಿ ಮೂಡಿಬಂದಿದೆ. ಈ ಸಂದರ್ಭದಲ್ಲಿ ಅವರೊಂದಿಗೆ ಆಗಮಿಸಿದ್ದ ಶ್ರೀಲಂಕಾದ ಗಣ್ಯರು ಹಾಗೂ ನಮ್ಮ ಭಾಗದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Kannada Dunia