ಕನ್ನಡದುನಿಯಾ
1.6M Followers ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.
ಬಜೆಟ್ ನಲ್ಲಿ 7 ನೇ ವೇತನ ಆಯೋಗ ರಚಿಸುವ ಕುರಿತು ಘೋಷಣೆ ಮಾಡದ ಬಗ್ಗೆ ಸರ್ಕಾರಿ ನೌಕರರಿಂದ ಅಸಮಾಧಾನ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ನೌಕರರ ಸಂಘದಿಂದ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರು, ಬಜೆಟ್ ನಂತರವೂ ವೇತನ ಆಯೋಗ ರಚನೆಗೆ ಅವಕಾಶವಿದ್ದು, ನೌಕರರಿಗೆ ಆತಂಕಬೇಡ. 7ನೇ ವೇತನ ಆಯೋಗ ರಚನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia