ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತರ ಇಬ್ರಾಹಿಂ ಎನ್.ಸುತಾರ ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಪ್ರಾಥಮಿಕ ಮೂಲಗಳ ಪ್ರಕಾರ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿತ್ತು ಎನ್ನಲಾಗಿದೆ.
ಇಬ್ರಾಹಿಂ ಎನ್. ಸುತಾರ್ (ಇಬ್ರಾಹಿಂ ನಬೀ ಸಾಹೇಬ್ ಸುತಾರ್) (ಹುಟ್ಟು-10 ಮೇ 1940) ವೈದಿಕ, ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿರುವ ತತ್ವಪದಕಾರರು ಮತ್ತು ಪ್ರವಚನಕಾರರು.
ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ 10-05-1940 ರಲ್ಲಿ ಮಹಾಲಿಂಗಪುರದ ಬಡಕುಟುಂಬದಲ್ಲಿ ಜನಿಸಿದರು. 1970 ರಲ್ಲಿ 'ಭಾವೈಕ್ಯ ಜನಪದ ಸಂಗೀತ ಮೇಳ' ವನ್ನು ಸ್ಥಾಪಿಸಿದರು. ಕಳೆದ 44 ವರ್ಷಗಳಿಂದ ನಾಡಿನಾದ್ಯಂತ ಸಾಹಿತ್ಯ ವಾಚನ, ಪ್ರವಚನ, ಭಜನೆ ಮತ್ತು ಸಮಾಜಸೇವೆಯ ಮುಖಾಂತರ ಸರ್ವಮಹಾತ್ಮರ ಸಾಹಿತ್ಯವನ್ನು ಬಳಸಿ ಭಾವೈಕ್ಯತೆ ಸಂದೇಶವನ್ನು ಬೀರುತ್ತ ಬಂದಿರುತ್ತಾರೆ. ಪ್ರತಿವರ್ಷ ನೂರಾರು ಕಾರ್ಯ ಕ್ರಮಗಳನ್ನು ನೀಡುತ್ತ, ಹಿಂದು-ಮುಸ್ಲಿಂ ರಲ್ಲಿ ಭಾವೈಕ್ಯತೆ ಬೆಸೆಯುವ ಪವಿತ್ರ ಕಾಯಕದಲ್ಲಿ ತೊಡಗಿಸಿಕೊಂಢಿದ್ದರು.
ಪ್ರಶಸ್ತಿಗಳು
1995 ರಲ್ಲಿ ಕರ್ನಾಟಕ ಸರಕಾರದಿಂದ ರಾಜ್ಯೋತ್ಸವ ಪ್ರಶಸ್ತಿ.
2018ರಲ್ಲಿ ಭಾರತ ಸರಕಾರದಿಂದ ಪದ್ಮಶ್ರೀ ಪ್ರಶಸ್ತಿ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now