Dailyhunt
BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

Kannada News Now 2 weeks ago

ಬೆಂಗಳೂರು: ರಾಜ್ಯದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಅವರು ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಅವರ ಆರೋಗ್ಯದಲ್ಲಿ ಚೇತರಿಗೆ ಕಂಡು ಬಂದಿತ್ತು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಘಟನೆಯ ವಿವರ:

ಬೆಂಗಳೂರಿನ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗವಹಿಸಿದ್ದರು. ಸಂಜೆ ಸುಮಾರು 4 ಗಂಟೆ 20 ನಿಮಿಷದ ಹೊತ್ತಿಗೆ ಅವರು ವೇದಿಕೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರು. ಇದನ್ನು ಕಂಡು ಸಭಾಂಗಣದಲ್ಲಿದ್ದವರು ಕ್ಷಣಕಾಲ ಆತಂಕಕ್ಕೊಳಗಾದರು.

ಮಾನವೀಯತೆ ಮೆರೆದ ಸಭಾಧ್ಯಕ್ಷರು:

ಘಟನೆಯ ವೇಳೆ ಸಭಾಂಗಣದಲ್ಲಿದ್ದ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ತಕ್ಷಣವೇ ಸ್ಪಂದಿಸಿದರು. ಆಂಬ್ಯುಲೆನ್ಸ್ ಬರುವವರೆಗೆ ಕಾಯದೆ, ತಮ್ಮದೇ ಕಾರಿನಲ್ಲಿ ಸಂತೋಷ್ ಹೆಗಡೆ ಅವರನ್ನು ಕೂರಿಸಿಕೊಂಡು ಆಸ್ಪತ್ರೆಗೆ ಧಾವಿಸಿದರು. ಖಾದರ್ ಅವರೇ ಸ್ವತಃ ಜೊತೆಯಲ್ಲಿದ್ದು, ಹೆಗಡೆ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು.

ಆರೋಗ್ಯದಲ್ಲಿ ಚೇತರಿಗೆ, ಆಸ್ಪತ್ರೆಯಿಂದ ಡಿಸ್ಚಾರ್ಜ್:

ವಿಕ್ರಂ ಆಸ್ಪತ್ರೆಯ ವೈದ್ಯರು ಸಂತೋಷ್ ಹೆಗಡೆ ಅವರಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ. ವಯೋಸಹಜ ಸುಸ್ತು ಅಥವಾ ರಕ್ತದೊತ್ತಡದ ಏರುಪೇರಿನಿಂದ ಅವರು ಅಸ್ವಸ್ಥರಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದ್ದು, ಹೆಚ್ಚಿನ ತಪಾಸಣೆ ನಡೆಸಿ, ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ್ದರು. ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರ ಆರೋಗ್ಯದಲ್ಲಿ ಚೇತರಿಕೆ ಉಂಟಾಗಿತ್ತು, ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ 'ಓದುವ ಕನ್ನಡಕ'!

Dailyhunt
Disclaimer: This content has not been generated, created or edited by Dailyhunt. Publisher: Kannada News Now