Kannada News Now
1.7M Followersಚಿಕ್ಕಮಗಳೂರು : ಕೊರೋನಾ ಸೋಂಕಿನ ಪ್ರಕರಣಗಳ ಹಿನ್ನಲೆಯಲ್ಲಿ ಈಗಾಗಲೇ ಅನೇಕ ರಾಜ್ಯಗಳು ವಿವಿಧ ಪರೀಕ್ಷೆಗಳನ್ನು ರದ್ದು ಪಡಿಸಿವೆ. ಜೊತೆಗೆ ಕೆಲ ಪರೀಕ್ಷೆಗಳನ್ನು ಮುಂದೂಡಿಕೆ ಸಹ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿನ 1 ರಿಂದ 9ನೇ ತರಗತಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇನ್ನೆರಡು ದಿನದಲ್ಲಿ ಶಿಕ್ಷಣ ಇಲಾಖೆ ತೀರ್ಮಾನ ಪ್ರಕಟಿಸಲಿದೆ ಎಂದಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇನೆ, ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆದು ಚರ್ಚಿಸಿದ್ದೇವೆ, ನಾವು ಒಂದು ಹಂತಕ್ಕೆ ಬಂದಿದ್ದೇವೆ. ಇನ್ನೆರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು, ಇನ್ನೆರಡು ದಿನದಲ್ಲೇ ಶಿಕ್ಷಣ ಇಲಾಖೆ ತೀರ್ಮಾನ ಪ್ರಕಟಿಸಲಿದೆ ಎಂದಿದ್ದಾರೆ.
ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. 1 ರಿಂದ 9ನೇ ತರಗತಿ ಪರೀಕ್ಷೆ ನಡೆಸೋ ವಿಚಾರ ಕುರಿತಂತೆ ಇನ್ನೆರಡು ದಿನಗಳಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಪರೀಕ್ಷೆ ನಡೆಸ ಬೇಕೇ, ಬೇಡವೇ ಎನ್ನುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now