ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯದ ಕೋವಿಡ್ ಸ್ಥಿತಿಗತಿಗೆ ( Covid-19 ) ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ ಕರೆದಿದ್ದಾರೆ.
ನಿನ್ನೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದ್ದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಇಂದು ಓಲ್ಡ್ ಮದ್ರಾಸ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರನ್ನು ವಿವಿಧ ಪರೀಕ್ಷೆಗೆ ಒಳಪಡಿಸಿದಂತ ವೈದ್ಯರು, ಸೌಮ್ಯ ಲಕ್ಷಣಗಳಿರೋ ಕಾರಣ, ಮನೆಯಲ್ಲಿಯೋ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುವಂತೆ ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದಾರೆ.
ಇದೀಗ ಸಿಎಂ ಬಸವರಾಜ ಬೊಮ್ಮಾಯಿಯವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಆರ್ ಟಿ ನಗರದ ತಮ್ಮ ನಿವಾಸಕ್ಕೆ ತೆರಳಿದ್ದಾರೆ. ಇಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯದ ಕೊರೋನಾ ಸ್ಥಿತಿಗತಿ ಬಗ್ಗೆ ಚರ್ಚಿಸೋದಕ್ಕೆ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಸಭೆಯನ್ನು ನಡೆಸಲಿದ್ದಾರೆ. ವರ್ಚೂಯಲ್ ಮೂಲಕ ನಡೆಯುತ್ತಿರುವಂತ ಸಭೆಯಲ್ಲಿ ತಜ್ಞರು, ಸಚಿವರು ಭಾಗಿಯಾಗಲಿದ್ದಾರೆ.
ಇಂದು ನಡೆಯುತ್ತಿರುವ ಸಿಎಂ ನೇತೃತ್ವದ ಕೋವಿಡ್ ನಿಯಂತ್ರಣ ಸಭೆ ಮಹತ್ವದ್ದಾಗಿದ್ದು, ರಾಜ್ಯ ರಾಜಧಾನಿ ಸೇರಿದಂತೆ ಕೊರೋನಾ ಹೆಚ್ಚಳವಾಗಿರುವಂತ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಬಗ್ಗೆಯೂ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆರಂಭಿಕವಾಗಿ 10 ದಿನ ಲಾಕ್ ಡೌನ್ ಜಾರಿಗೊಳಿಸೋ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಆ ಸಭೆಯ ಆರಂಭಕ್ಕೆ ಕೆಲವೇ ಗಂಟೆ ಬಾಕಿ ಇದ್ದು, ಯಾವೆಲ್ಲಾ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎನ್ನುವ ಬಗ್ಗೆ ಕಾದು ನೋಡಬೇಕಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now