Dailyhunt Logo
  • Light mode
    Follow system
    Dark mode
    • Play Story
    • App Story
EV ಬಸ್‌ಗಳ ಸರಣಿ ಅಪಘಾತ: ಹೊಸ ಎಲೆಕ್ಟ್ರಿಕ್ ಬಸ್ ಖರೀದಿಗೆ ಸರ್ಕಾರದ ತಾತ್ಕಾಲಿಕ ಬ್ರೇಕ್

EV ಬಸ್‌ಗಳ ಸರಣಿ ಅಪಘಾತ: ಹೊಸ ಎಲೆಕ್ಟ್ರಿಕ್ ಬಸ್ ಖರೀದಿಗೆ ಸರ್ಕಾರದ ತಾತ್ಕಾಲಿಕ ಬ್ರೇಕ್

Kannada News Now 1 week ago

ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ (EV) ಬಸ್‌ಗಳಿಂದ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇವಿ ಬಸ್ ಚಾಲಕರ ನಿರ್ಲಕ್ಷ್ಯ ಹಾಗೂ ತಪ್ಪುಗಳಿಂದಾಗಿ ಅಮಾಯಕರು ಜೀವ ಕಳೆದುಕೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತಿರುವ ಸಾರಿಗೆ ಇಲಾಖೆ, ಸದ್ಯಕ್ಕೆ ಹೊಸ ಇವಿ ಬಸ್‌ಗಳ ಖರೀದಿಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

ಕೇಂದ್ರಕ್ಕೆ ಪತ್ರ ಬರೆದಿದ್ದ ಮಾಜಿ ಸಚಿವರು

ಇವಿ ಬಸ್‌ಗಳಿಂದ ಸೃಷ್ಟಿಯಾಗುತ್ತಿರುವ ಅವಾಂತರಗಳ ಬಗ್ಗೆ ಹಿಂದಿನ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರು ಸೂಕ್ತ ದಾಖಲೆಗಳ ಸಮೇತ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಗಮನ ಸೆಳೆದಿದ್ದರು. ಆದಾಗ್ಯೂ, ಈ ಸಮಸ್ಯೆಗೆ ಯಾವುದೇ ಶಾಶ್ವತ ಪರಿಹಾರ ಸಿಗದ ಕಾರಣ, ಸದ್ಯಕ್ಕೆ ಹೊಸ ಇವಿ ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ಮುಂದೂಡುವುದು ಸೂಕ್ತ ಎಂಬ ತೀರ್ಮಾನಕ್ಕೆ ರಾಜ್ಯ ಸರ್ಕಾರ ಬಂದಿದೆ.

ತನಿಖೆ ಮತ್ತು ಅಧ್ಯಯನಕ್ಕೆ ಆದೇಶ

ಪದೇ ಪದೇ ಮರುಕಳಿಸುತ್ತಿರುವ ಈ ಅಪಘಾತಗಳಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಸಚಿವರ ನಿರ್ದೇಶನದ ಮೇರೆಗೆ ನಗರದಲ್ಲಿ ಸಂಚರಿಸುವ ಇವಿ ಬಸ್‌ಗಳ ಕಾರ್ಯಕ್ಷಮತೆ ಹಾಗೂ ತಾಂತ್ರಿಕತೆ ಕುರಿತು ಸಮಗ್ರ ಅಧ್ಯಯನ ನಡೆಸಲು ಸಾರಿಗೆ ಇಲಾಖೆಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.

1,500 ಹೊಸ ಬಸ್‌ಗಳ ಸೇರ್ಪಡೆ ವಿಳಂಬ

ಪ್ರಸಕ್ತ ವರ್ಷದಲ್ಲಿ ರಾಜ್ಯ ಸಾರಿಗೆ ಸಂಸ್ಥೆಗೆ ಸುಮಾರು ಒಂದೂವರೆ ಸಾವಿರ (1,500) ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಸೇರ್ಪಡೆಗೊಳಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಇವಿ ಬಸ್‌ಗಳ ಸುರಕ್ಷತೆಯ ಕುರಿತು ಸರ್ಕಾರ ವರದಿ ಕೇಳಿರುವುದರಿಂದ ಈ ಖರೀದಿ ಪ್ರಕ್ರಿಯೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ತಜ್ಞರ ಸಮಿತಿ ನೀಡುವ ತನಿಖಾ ವರದಿಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಹೊಸ ಇವಿ ಬಸ್‌ಗಳನ್ನು ಖರೀದಿಸಬೇಕೇ ಬೇಡವೇ ಎಂಬುದನ್ನು ಸರ್ಕಾರ ಅಂತಿಮವಾಗಿ ನಿರ್ಧರಿಸಲಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now