ಭಾರತ
ಶಾಕಿಂಗ್ : ಮೂಢನಂಬಿಕೆಗೆ ದಾಸರಾಗಿ ಹೆತ್ತ ಮಕ್ಕಳನ್ನೇ ಕೊಲೆ ಮಾಡಿದ ತಂದೆ -ತಾಯಿ

ಆಂಧ್ರಪ್ರದೇಶ: ಮೂಢನಂಬಿಕೆಗೆ ಬಲಿಯಾದ ವಿದ್ಯಾವಂತ ಪೋಷಕರು ತಮ್ಮ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಘಟನೆ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ ನಡೆದಿದೆ.
ತಂದೆ ತಾಯಿಯ ಮೂಡ ನಂಬಿಕೆಗೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದ ಅಲೈಕ್ಯ(27) ಮತ್ತು ಬಿಬಿಎ ಕಲಿಯುತ್ತಿದ್ದ ಸಾಯಿದಿವ್ಯ (22) ಮೂಢನಂಬಿಕೆಗೆ ಬಲಿಯಾದವರು. ಸಾಯಿದಿವ್ಯ ಎಆರ್ ರೆಹಮಾನ್ ಮ್ಯೂಸಿಕ್ ಅಕಾಡೆಮಿ ವಿದ್ಯಾರ್ಥಿಯಾಗಿದ್ದಾರೆ.
ತಂದೆ ಪುರುಷೋತ್ತಮ್ ನಾಯ್ಡು ಮತ್ತು ತಾಯಿ ಪದ್ಮಜಾ ಇಬ್ಬರು ಬೇರೆ ಬೇರೆ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದರು. ಇವರ ಮನೆಯಲ್ಲಿ ನಿತ್ಯ ಮಾಟ-ಮಂತ್ರ,ಪೂಜೆಗಳು ನಡೆಯುತ್ತಿದ್ದವಂತೆ. ಇದೀಗ ಮಕ್ಕಳು ಮತ್ತೆ ಹುಟ್ಟಿ ಬರುತ್ತಾರೆ ಎಂಬ ನಂಬಿಕೆಯಿಂದ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಪೋಷಕರಿಬ್ಬರೂ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಮೂಲಗಳು ತಿಳಿಸಿವೆ. ಮದನಪಲ್ಲಿ ಡಿಎಸ್ಪಿ ರವಿ ಮನೋಹರಾಚಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್ ಸೇರಿಕೊಳ್ಳಿ
https://bit.ly/367sVuW