Saturday, 24 Apr, 12.30 am ಕನ್ನಡ ಪ್ರಭ

ಟಾಪ್ 5
ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಪದ್ಮಶ್ರೀ ವಿಜೇತ ಸಾಲುಮರದ ತಿಮ್ಮಕ್ಕ

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ.

ಬೆನ್ನು ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಅಪೋಲೋ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಆಸ್ಪತ್ರೆ ತುಂಬಾ ಕೊರೋನಾ ರೋಗಿಗಳು ತುಂಬಿ ಹೋಗಿರುವುದರಿಂದ ನಾನ್ ಕೋವಿಡ್ ರೋಗಿಗಳಿಗೆ ಹಾಸಿಗೆ ಸಮಸ್ಯೆ ಎದುರಾಗಿದೆ.

ಸಾಲುಮರದ ತಿಮ್ಮಕ್ಕ ಸಹ ಹಾಸಿಗೆಗಾಗಿ ಎರಡು ಗಂಟೆಗಳ ಕಾಲ ಪರದಾಟ ನಡೆಸಬೇಕಾಯಿತು. ಇನ್ನು ತಿಮ್ಮಕ್ಕ ಅವರಿಗೆ ಬೆಡ್ ಹೊಂದಿಸಲು ವೈದ್ಯರು ಸಹ ಪ್ರಯತ್ನಿ ನಡೆಸಿದ್ದರು. ನಂತರ ಅವರಿಗೆ ಹಾಸಿಗೆ ಹೊಂದಿಸಿ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿಂದೆ ಬಚ್ಚಲುಮನೆಯಲ್ಲಿ ಬಿದ್ದು ಬೆನ್ನುಮೂಳೆ ಮುರಿತವಾಗಿದ್ದ ತಿಮ್ಮಕ್ಕ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದೀಗ ಅದೇ ಜಾಗದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Prabha
Top