Dailyhunt
BIG NEWS: ವೇತನ ಕಡಿತದ ಭೀತಿಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

BIG NEWS: ವೇತನ ಕಡಿತದ ಭೀತಿಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ದೇಶದಲ್ಲಿ ಲಾಕ್‌ ಡೌನ್‌ ಜಾರಿಯಲ್ಲಿರುವ ಪರಿಣಾಮ ಆರ್ಥಿಕ ಚಟುವಟಿಕೆಗಳಿಲ್ಲದ ಕಾರಣ ಕೇಂದ್ರ ಸರ್ಕಾರ ಕೆಲವೊಂದು ವರ್ಗಗಳ ಜನತೆ ನೆರವಿಗಾಗಿ ಬೃಹತ್‌ ಮೊತ್ತದ ಪ್ಯಾಕೇಜ್‌ ಘೋಷಿಸಿತ್ತು.

ಹೀಗಾಗಿ ಇದನ್ಜು ಸರಿದೂಗಿಸಲು ಕೇಂದ್ರ ಸರ್ಕಾರಿ ನೌಕರರ ವೇತನ ಕಡಿತವಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದೀಗ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನೌಕರರಿಗೆ ಬಿಗ್‌ ರಿಲೀಫ್‌ ನೀಡಿದ್ದಾರೆ.

ವೇತನ ಕಡಿತದ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ. ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಕಡಿತ ಮಾಡುವುದಿಲ್ಲವೆಂದು ಹೇಳುವ ಮೂಲಕ ನೌಕರರಿಗೆ ನೆಮ್ಮದಿ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia