
ಸರ್ಕಾರದ ವಿವಿಧ ಯೋಜನೆಗಳಡಿ ಮಾಸಿಕ 'ಪಿಂಚಣಿ' ಪಡೆಯುತ್ತಿರುವ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ, ಮೈತ್ರಿ, ಮನಸ್ವಿನಿ ಹಾಗೂ ಇತರೆ ಮಾಸಿಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಮೂಲಕ ಆಧಾರ್ ಆಧರಿತ ಪಿಂಚಣಿ ಪಾವತಿ ಮಾಡಲು ತೀರ್ಮಾನಿಸಲಾಗಿದೆ.
ಈ ಹಿನ್ನಲೆಯಲ್ಲಿ ಫಲಾನುಭವಿಗಳು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿಯ ಖಾತೆಗೆ ಕಡ್ಡಾಯವಾಗಿ ಜುಲೈ 3ರ ಒಳಗೆ ಲಿಂಕ್ ಮಾಡಿಸಿಕೊಳ್ಳಲು ಕೋರಲಾಗಿದ್ದು, ತಪ್ಪಿದಲ್ಲಿ ಸರ್ಕಾರದಿಂದ ಬರುವ ಪಿಂಚಣಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
The post ವಿವಿಧ ಯೋಜನೆಗಳಡಿ ಮಾಸಿಕ 'ಪಿಂಚಣಿ' ಪಡೆಯುತ್ತಿರುವ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ first appeared on Kannada Dunia | Kannada News | Karnataka News | India News ..