Thursday, 22 Apr, 2.26 pm Kannadanet

ನ್ಯೂಸ್
ವಿಜಯಪುರ,ಬಂಗಾರಪೇಟೆ ಪತ್ರಕರ್ತರು ಬಲಿ

ವಿಜಯಪುರದ ಪತ್ರಕರ್ತ ಜಾಫರ್ ಕಲಾದಗಿ (42) ಕೋವಿಡ್ ಗೆ ಬಲಿಯಾಗಿದ್ದಾರೆ.

ಬಿಜಾಪುರ ಮಿರರ್ ಇಂಗ್ಲೀಷ್ ದಿನ ಪತ್ರಿಕೆ ನಡೆಸುತ್ತಿದ್ದ ಜಾಫರ್ ಕಲಾದಗಿ ಆಸ್ಪತ್ರೆಯಲ್ಲಿ ತೀವ್ರ ಉಸಿರಾಟದ ಸಮಸ್ಯೆಯಿಂದ ಕೊನೆಯುಸಿರೆಳೆದರು.

ಸಂತಾಪ:
ಪತ್ರಕರ್ತ ಜಾಫರ್ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಜಾಫರ್ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.

ಕೋವಿಡ್ ಗೆ ಪತ್ರಕರ್ತ ಬಲಿ

ಬಂಗಾರಪೇಟೆ ತಾಲ್ಲೂಕಿನ ಪತ್ರಕರ್ತ ಎ.ಎಂ.ವೆಂಕಟೇಶ್ ಅವರು ಕೋವಿಡ್ ಗೆ ಬಲಿಯಾಗಿದ್ದಾರೆ.

ವೆಂಕಟೇಶ್ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿಯನ್ನು ದೇವರು ಕರುಣಿಸಲಿ

ಸಂತಾಪ:
ಪತ್ರಕರ್ತ ವೆಂಕಟೇಶ್ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannadanet
Top