Dailyhunt
BIGG BREAKING NEWS : ರಾಜ್ಯದಲ್ಲಿ 'ಕಾಲೇಜು'ಗಳ ಆರಂಭಕ್ಕೆ ಸರ್ಕಾರದಿಂದ 'ಗ್ರೀನ್ ಸಿಗ್ನಲ್'

BIGG BREAKING NEWS : ರಾಜ್ಯದಲ್ಲಿ 'ಕಾಲೇಜು'ಗಳ ಆರಂಭಕ್ಕೆ ಸರ್ಕಾರದಿಂದ 'ಗ್ರೀನ್ ಸಿಗ್ನಲ್'

Kannada News Now 4 years ago

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪಾಸಿಟಿವಿಟಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರೋ ಕಾರಣ, ಅನ್ ಲಾಕ್ 3.0 ಜಾರಿಗೊಳಿಸಲಾಗಿದೆ. ಇದೀಗ ಮುಂದುವರೆದು, ರಾಜ್ಯ ಸರ್ಕಾರವು ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ಗಳಿಗೆ ಸಂಬಂಧಿಸಿದಂತೆ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿಸಿ ಆದೇಶಿಸಿದೆ.

BIG BREAKING NEWS : ರಾಜ್ಯ ಸರ್ಕಾರದಿಂದ 'ವಿಧಾನಸೌಧದ ಕಾರಿಡಾರ್'ಗಳಲ್ಲಿ ವೀಡಿಯೋ, ಛಾಯಾಗ್ರಹಣಕ್ಕೆ ನಿಷೇಧ

ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದು, ಕೊರೋನಾ ಸೋಂಕಿನ ಪಾಸಿಟಿವಿಟಿ ದರಗಳ ಇಳಿಕೆಯ ಬಿನ್ನಲೆಯಲ್ಲಿ ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ( ಮೆಡಿಕಲ್, ಡೆಂಟಲ್ ಕಾಲೇಜ್, ಆಯುಷ್ ಕಾಲೇಜು ಮತ್ತು ಇನ್ಸಿಟಿಟ್ಯೂಷನ್ನ್, ನರ್ಸಿಂಗ್ ಕಾಲೇಜು ಮತ್ತು ಹೆಲ್ತ್ ಕೇರ್ ಅಕಾಡೆಮಿಕ್ ಇನ್ಟಿಟ್ಯೂಷನ್, ಕಾಲೇಜು ಇತರೆ) ಸಂಸ್ಥೆಗಳು ಕೂಡಲೇ ತೆರೆಯಲು ಈ ಕೆಳಗಿನ ಷರತ್ತುಗಳೊಂದಿಗೆ ಅನುಮತಿಸಿದ್ದಾರೆ.

BIG BREAKING NEWS : ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳುತ್ತಿರೋದು ಸುಳ್ಳ, ನನಗೆ ನಟ ದರ್ಶನ್ ಹೊಡೆದಿಲ್ಲ - ಸಂದೇಶ್ ಹೊಟೇಲ್ ಸಿಬ್ಬಂದಿ ಗಂಗಾಧರ್

  • ಕಾಲೇಜುಗಳಿಗೆ ಆಗಮಿಸುವಂತ ವಿದ್ಯಾರ್ಥಿಗಳು, ಟೀಚಿಂಗ್ ಸ್ಟಾಫ್, ನಾನ್ ಟೀಚಿಂಗ್ ಸ್ಟಾಪ್ ಅಲ್ಲದೇ ಇತರೆ ಸಿಬ್ಬಂದಿಗಳು ಕನಿಷ್ಠ ಪಕ್ಷ ಒಂದು ಡೋಸ್ ಕೊರೋನಾ ಲಸಿಕೆ ಪಡೆದಿರಬೇಕು.
  • ಹೀಗೆ ತೆರೆಯುವಂತ ಕಾಲೇಜು, ಇನ್ಟಿಟ್ಯೂಟ್ ಗಳು ಕಡ್ಡಾಯವಾಗಿ ಕೊರೋನಾ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಬೇಕು.

ಈ ಮೇಲ್ಕಂಡ ಷರತ್ತುಗಳೊಂದಿಗೆ ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ಕಾಲೇಜುಗಳನ್ನು ತೆರೆಯೋದಕ್ಕೆ ಅನುಮತಿಸಲಾಗಿದೆ. ಒಂದು ವೇಳೆ ಕೊರೋನಾ ಸೋಂಕಿನ ಮಾರ್ಗಸೂಚಿ ಕ್ರಮಗಳನ್ನು ಪಾಲಿಸದೇ ಇದ್ದಲ್ಲಿ, ಅಂತಹ ಕಾಲೇಜು, ಇನ್ಟಿಟ್ಯೂಷನ್ ವಿರುದ್ಥ ಕೊರೋನಾ ಸೋಂಕಿನ ನಿಯಂತ್ರಣ ಕಾನೂನು ಕ್ರಮ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005ರ ಸೆಕ್ಷನ್ 51 ರಿಂದ 60 ರಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಐಪಿಸಿ ಸೆಕ್ಷನ್ 188 ರಡಿಯಲ್ಲಿಯೂ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ವರದಿ : ವಸಂತ ಬಿ ಈಶ್ವರಗೆರೆ

'ಕುಮಾರಸ್ವಾಮಿ - ಇಂದ್ರಜಿತ್ ಲಂಕೇಶ್ ಭೇಟಿ' ಫೋಟೋ ವೈರಲ್ : ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ.?



Dailyhunt
Disclaimer: This content has not been generated, created or edited by Dailyhunt. Publisher: Kannada News Now