Dailyhunt
ರಾಜ್ಯದಲ್ಲಿ ಕಾಲೇಜು ಆರಂಭದ ಕುರಿತಂತೆ ಡಿಸಿಎಂ ಅಶ್ವತ್ಥ್ ನಾರಾಯಣರಿಂದ ಮಹತ್ವದ ಮಾಹಿತಿ

ರಾಜ್ಯದಲ್ಲಿ ಕಾಲೇಜು ಆರಂಭದ ಕುರಿತಂತೆ ಡಿಸಿಎಂ ಅಶ್ವತ್ಥ್ ನಾರಾಯಣರಿಂದ ಮಹತ್ವದ ಮಾಹಿತಿ

Kannada News Now 4 years ago

ಬೆಂಗಳೂರು : ಇನ್ನು 10 ದಿನದೊಳಗೆ ರಾಜ್ಯದ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಜವಾಬ್ದಾರಿಯನ್ನು ಆಯಾ ಕಾಲೇಜು ಪ್ರಾಂಶುಪಾಲರಿಗೆ ನೀಡಲಾಗುವುದು ಎಂದು ಡಿಸಿಎಂ ಅಶ್ವಥ್​ನಾರಾಯಣ ತಿಳಿಸಿದ್ದಾರೆ.

ಆದಾಯ ತೆರಿಗೆ ನಿಯಮಗಳಿಂದ `LPG' ಸಿಲಿಂಡರ್ ಬೆಲೆವರೆಗೆ : ಜುಲೈ 1 ರಿಂದ ಬದಲಾಗಲಿವೆ ಈ ನಿಯಮಗಳು

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಇನ್ನು 10 ದಿನದೊಳಗೆ ರಾಜ್ಯದ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಜವಾಬ್ದಾರಿಯನ್ನು ಆಯಾ ಕಾಲೇಜು ಪ್ರಾಂಶುಪಾಲರಿಗೆ ನೀಡಲಾಗುವುದು, ಎಲ್ಲಾ ವಿದ್ಯಾರ್ಥಿಗಳಿಗೂ ಲಸಿಕೆ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದರು.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಬಾಯಿಯನ್ನು ತೆರೆಯಲು ಸಾಧ್ಯವಾಗದಂತಹ 'ತೂಕ ಇಳಿಕೆ ಯಂತ್ರ' ತಯಾರಿಸಿದ ವಿಜ್ಞಾನಿಗಳು : ಜನರಿಂದ ಟೀಕೆ

18 ವರ್ಷ ಮೀರಿದ ಎಲ್ಲ ಕಾಲೇಜು ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬ್ಬಂದಿಗಳು ಲಸಿಕೆ ಪಡೆಯಬೇಕು, ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಡೋಸ್​ ಲಸಿಕೆ ಪಡೆದಿರಬೇಕು. ಇಲ್ಲವಾದರೆ, ಪ್ರವೇಶ ನಿರಾಕರಿಸಲಾಗುವುದು ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ತಿಳಿಸಿದ್ದರು. ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನಲೆ ಕಾಲೇಜು ಪುನರ್​ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಆದ್ದರಿಂದ, 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದ್ದು, ಈ ಜವಾಬ್ದಾರಿಯನ್ನು ಕಾಲೇಜು ಪ್ರಾಂಶುಪಾಲರ ಮೇಲೆ ಹಾಕಲಾಗಿದೆ ಎಂದು ಹೇಳಿದರು.

Dailyhunt
Disclaimer: This content has not been generated, created or edited by Dailyhunt. Publisher: Kannada News Now