
ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸಕಾರ ಆದೇಶಿಸಿದ್ದು, ದೀಪಾವಳಿಗೆ ನೌಕರರಿಗೆ ಬಂಪರ್ ಕೊಡುಗೆ ಘೋಷಿಸಿದೆ.
ಜುಲೈ 1ರಿಂದ ಅನ್ವಯ ಆಗುವಂತೆ ರಾಜ್ಯ ಸರಕಾರಿ ನೌಕರರಿಗೆ ಹಾಗೂ ನಿವೃತ್ತ ನೌಕರರಿಗೂ ಸೇರಿ ಶೇ.3ರಷ್ಟು ತುಟ್ಟಿಭತ್ಯೆ ಹಚ್ಚಳ ಮಾಡಿ ಸರಕಾರ ಆದೇಶ ಹೊರಡಿಸಿದೆ.
ತುಟ್ಟಿಭತ್ಯೆಯನ್ನು ಶೇ. 21.50ರಿಂದ ಶೇ.24.50ಕ್ಕೆ ಹೆಚ್ಚಿಸಲಾಗಿದೆ. ಇದು ರಾಜ್ಯದ ಎಲ್ಲಾ ಮಾದರಿಯ ಸರಕಾರಿ ನೌಕರರಿಗೆ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.