DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸುತ್ತಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ತಮ್ಮ ಸರ್ಕಾರದ ಮೂರು ವರ್ಷದ ಸಾಧನೆಗಳನ್ನ ವಿವಿರಿಸುತ್ತಾ ಹೈನುಗಾರಿಕೆ ಕ್ಷೇತ್ರದ ಸಾಧನೆ ತಿಳಿಸಿದ್ದಾರೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. ಸಶಕ್ತ, ಸಮೃದ್ಧ, ಸ್ವಾಭಿಮಾನಿ ಕರ್ನಾಟಕದ ಮರುನಿರ್ಮಾಣ ಕಾರ್ಯದಲ್ಲಿ ಬಹಳಷ್ಟು ದೂರ ಕ್ರಮಿಸಿದ್ದೇವೆ, ನಮ್ಮ ಈ ಪ್ರಯತ್ನ ಮುಂದೆ ಇನ್ನಷ್ಟು ಶೀಘ್ರ ಹಾಗೂ ಪರಿಣಾಮಕಾರಿಯಾಗಿರಲಿದೆ.
ಈ ಮೂರು ವರ್ಷಗಳಲ್ಲಿ ನಿಮಗಾಗಿ ನಾವು ಸಲ್ಲಿಸಿದ ಸೇವೆಯ ಮಾಹಿತಿ ಹೀಗಿದೆ..
ತುರ್ತು ಪಶುವೈದ್ಯಕೀಯ ಚಿಕಿತ್ಸೆಯನ್ನು ರೈತರ ಮನೆ ಬಾಗಿಲಲ್ಲಿ ಒದಗಿಸಲು 275 ಸಂಚಾರಿ ಪಶುಚಿಕಿತ್ಸಾ ಘಟಕಗಳ ಸ್ಥಾಪನೆ
8.90 ಲಕ್ಷ ಹಾಲು ಉತ್ಪಾದಕರಿಗೆ 2023-24ನೇ ಸಾಲಿನಲ್ಲಿ ₹1168.07 ಕೋಟಿ, 2024-25ನೇ ಸಾಲಿನಲ್ಲಿ ₹1692.35 ಕೋಟಿ, 2025-26ನೇ ಸಾಲಿನಲ್ಲಿ 9.07 ಲಕ್ಷ ಹಾಲು ಉತ್ಪಾದಕರಿಗೆ ₹1689.65 ಕೋಟಿ ಪ್ರೋತ್ಸಾಹಧನ ನೇರ ವರ್ಗಾವಣೆ
