Dailyhunt Logo
  • Light mode
    Follow system
    Dark mode
    • Play Story
    • App Story
ಶಾಲಾ ಬಸ್‌ಗಳ ಮೇಲೆ ಪೊಲೀಸರ ಹಠಾತ್ ದಾಳಿ, ದಾಖಲೆಗಳ ಪರಿಶೀಲನೆ

ಶಾಲಾ ಬಸ್‌ಗಳ ಮೇಲೆ ಪೊಲೀಸರ ಹಠಾತ್ ದಾಳಿ, ದಾಖಲೆಗಳ ಪರಿಶೀಲನೆ

ಡುಪಿ: ಶಾಲಾ ವಾಹನಗಳ ಅಪಘಾತ ಪ್ರಕರಣಗಳು ಮಿತಿಮೀರುತ್ತಿರುವ ಮತ್ತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಉಡುಪಿ ಮತ್ತು ಮಣಿಪಾಲ ಪೊಲೀಸರು ಮಂಗಳವಾರ ಬೆಳಗ್ಗೆ ಶಾಲಾ ಬಸ್‌ಗಳ ಮೇಲೆ ಹಠಾತ್ ತಪಾಸಣೆ ನಡೆಸಿದರು. ಈ ವಿಶೇಷ ಕಾರ್ಯಾಚರಣೆಯು ಉಡುಪಿ ಹಾಗೂ ಮಣಿಪಾಲ ವ್ಯಾಪ್ತಿಯ ವಿವಿಧೆಡೆ ನಡೆಯಿತು.

ಈ ತಪಾಸಣೆಯ ಮುಖ್ಯ ಉದ್ದೇಶ ಮಕ್ಕಳ ಸುರಕ್ಷತೆಯನ್ನು ಖಾತ್ರಿಪಡಿಸುವುದಾಗಿತ್ತು. ವಾಹನಗಳಲ್ಲಿ ನಿಗದಿಪಡಿಸಿದ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕರೆದೊಯ್ಯಲಾಗುತ್ತಿದೆಯೇ ಅಥವಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದರು. ಇದಲ್ಲದೆ, ಚಾಲಕರ ಪರವಾನಗಿ, ವಾಹನದ ಫಿಟ್‌ನೆಸ್ ಪ್ರಮಾಣಪತ್ರ, ವಿಮಾ ಪತ್ರಗಳು ಮತ್ತು ಆರ್‌ಟಿಒ ಪರ್ಮಿಟ್ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು.

ಇತ್ತೀಚೆಗೆ ಮಣಿಪಾಲದಲ್ಲಿ ನಡೆದ ಖಾಸಗಿ ಶಾಲಾ ಬಸ್ ಅಪಘಾತವು ಇಲಾಖೆಯನ್ನೇ ಬೆಚ್ಚಿಬೀಳಿಸಿತ್ತು. ಆ ಘಟನೆಯಲ್ಲಿ ಚಾಲನಾ ಪರವಾನಗಿ ಇಲ್ಲದ ಕಂಡಕ್ಟರ್ ಬಸ್ ಚಲಾಯಿಸುತ್ತಿದ್ದುದು ತನಿಖೆಯಲ್ಲಿ ಬಹಿರಂಗವಾಗಿತ್ತು. ಇಂತಹ ನಿರ್ಲಕ್ಷ್ಯದ ಘಟನೆಗಳು ಮರುಕಳಿಸದಂತೆ ತಡೆಯಲು ಪೊಲೀಸರು ಇದೀಗ ಶಾಲಾ ವಾಹನಗಳ ಮೇಲೆ ವಿಶೇಷ ನಿಗಾ ವಹಿಸಲು ನಿರ್ಧರಿಸಿದ್ದಾರೆ.

ನಿಯಮಗಳನ್ನು ಗಾಳಿಗೆ ತೂರುವ ಶಾಲಾ ವಾಹನಗಳ ಮಾಲೀಕರು ಮತ್ತು ಆಡಳಿತ ಮಂಡಳಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಮಕ್ಕಳ ಜೀವದ ಜೊತೆ ಚೆಲ್ಲಾಟವಾಡದಂತೆ ಮತ್ತು ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.

ನಿಮ್ಮ ಇಮೇಲ್ ವಿಳಾಸವನ್ನು ಪ್ರಕಟಿಸಲಾಗುವುದಿಲ್ಲ.ಕಡ್ಡಾಯ ಫೀಲ್ಡ್ಗಳನ್ನು * ಮೂಲಕ ಗುರುತಿಸಲಾಗಿದೆ

ಪ್ರತಿಕ್ರಿಯೆ

ಹೆಸರು

ಇಮೇಲ್

ಊರು

ನಂತರದ ಪ್ರತಿಕ್ರಿಯೆಗಾಗಿ ನನ್ನ ಹೆಸರು, ಇಮೇಲ್ ಮತ್ತು ವೆಬ್‌ಸೈಟ್ ಅನ್ನು ಈ ಬ್ರೌಸರ್‌ನಲ್ಲಿ ಉಳಿಸಿ.

Dailyhunt
Disclaimer: This content has not been generated, created or edited by Dailyhunt. Publisher: Megamedia News Kannada