ಬೆಂಗಳೂರು: ರಾಜ್ಯದ(Karnataka) ವಿವಿಧ ಕಾರಾಗೃಹಗಳಲ್ಲಿ(Prison) ಜೀವಾವಧಿ ಶಿಕ್ಷೆ(Life imprisonment) ಅನುಭವಿಸುತ್ತಿದ್ದ ಕೈದಿಗಳಿಗೆ ಬಿಡುಗಡೆಯ ಸೌಭಾಗ್ಯ ದೊರೆತಿದೆ. ಜೈಲಿನಲ್ಲಿ ಸುದೀರ್ಘ ಕಾಲ ಕಳೆದು, ತಮ್ಮ ನಡತೆಯನ್ನು ತಿದ್ದಿಕೊಂಡು ಉತ್ತಮ ಜೀವನ ನಡೆಸುತ್ತಿದ್ದ ಒಟ್ಟು 24 ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಗೆ ಮುನ್ನವೇ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತಾದ ಪ್ರಸ್ತಾವನೆಗೆ ರಾಜ್ಯಪಾಲರು ಅಧಿಕೃತವಾಗಿ ಅಂಕಿತ ಹಾಕಿದ್ದು, ಬಿಡುಗಡೆಗೆ ಆದೇಶ ಹೊರಡಿಸಿದ್ದಾರೆ. ನಾಳೆ ಪರಪ್ಪನ ಅಗ್ರಹಾರದಲ್ಲಿ ಅಧಿಕೃತ ಬಿಡುಗಡೆ ಗೃಹ ಸಚಿವರ ನೇತೃತ್ವದಲ್ಲಿ ಕಾರ್ಯಕ್ರಮ ವಿವಿಧ ಜೈಲುಗಳ ಅರ್ಹ ಕೈದಿಗಳಿಗೆ ಮುಕ್ತಿ
ರಾಜ್ಯಪಾಲರ ಆದೇಶದ ಹಿನ್ನೆಲೆಯಲ್ಲಿ ನಾಳೆ ರಾಜಧಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಆವರಣದಲ್ಲಿ ಕೈದಿಗಳ ಅಧಿಕೃತ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೈಲಿನ ಕತ್ತಲೆಯಿಂದ ಹೊರಬಂದು ಹೊಸ ಬದುಕನ್ನು ಕಟ್ಟಿಕೊಳ್ಳಲು ಸಜ್ಜಾಗಿರುವ ಈ ಕೈದಿಗಳನ್ನು ಗೌರವಯುತವಾಗಿ ಅವರ ಕುಟುಂಬಸ್ಥರೊಂದಿಗೆ ಕಳುಹಿಸಿಕೊಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಿಡುಗಡೆಯ ಸುದ್ದಿ ತಿಳಿಯುತ್ತಿದ್ದಂತೆ ಕೈದಿಗಳ ಕುಟುಂಬಸ್ಥರಲ್ಲಿ ಹರ್ಷದ ವಾತಾವರಣ ನಿರ್ಮಾಣವಾಗಿದೆ.
ಈ ವಿಶೇಷ ಬಿಡುಗಡೆ ಸಮಾರಂಭದಲ್ಲಿ ರಾಜ್ಯದ ಗೃಹ ಸಚಿವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅವರೊಂದಿಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು, ಜೈಲು ಸೂಪರಿಂಟೆಂಡೆಂಟ್ ಹಾಗೂ ಇತರೆ ಪ್ರಮುಖ ಗಣ್ಯರು ಉಪಸ್ಥಿತರಿರಲಿದ್ದಾರೆ. ಗೃಹ ಸಚಿವರು ಬಿಡುಗಡೆಯಾಗುತ್ತಿರುವ ಕೈದಿಗಳಿಗೆ ಶುಭ ಹಾರೈಸಿ, ಸಮಾಜದ ಮುಖ್ಯವಾಹಿನಿಗೆ ಸೇರಲು ಅಗತ್ಯವಿರುವ ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಕೇವಲ ಬೆಂಗಳೂರು ಅಷ್ಟೇ ಅಲ್ಲದೆ, ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಕೇಂದ್ರ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅರ್ಹ ಕೈದಿಗಳನ್ನು ಈ ಪಟ್ಟಿಗೆ ಆಯ್ಕೆ ಮಾಡಲಾಗಿದೆ. ಜೈಲು ನಿಯಮಾವಳಿಗಳ ಪ್ರಕಾರ, ನಿಗದಿತ ವರ್ಷಗಳ ಶಿಕ್ಷೆ ಪೂರೈಸಿ, ಕಾರಾಗೃಹದ ಒಳಗಿನ ಶಿಸ್ತು, ಸಮಾಜಮುಖಿ ಕೆಲಸಗಳು ಮತ್ತು ಉತ್ತಮ ನಡವಳಿಕೆಯನ್ನು ಪರಿಗಣಿಸಿ ಪರಿಶೀಲನಾ ಸಮಿತಿಯು ಇವರ ಹೆಸರನ್ನು ಶಿಫಾರಸು ಮಾಡಿತ್ತು. ಆ ಸುದೀರ್ಘ ಪ್ರಕ್ರಿಯೆಯ ಬಳಿಕ ಇದೀಗ 24 ಕೈಗಳಿಗೆ ಮುಕ್ತಿ ಸಿಕ್ಕಂತಾಗಿದೆ.

