ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ (Monsoon Rain) ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರಾವಳಿ ಹಾಗೂ ಮಲೆನಾಡಿನ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವರುಣನ ಅಬ್ಬರ ಹೀಗೆಯೇ ಮುಂದುವರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆಯು (IMD) ನಾಳೆ ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ಅತ್ಯಂತ ಕಠಿಣ 'ರೆಡ್ ಅಲರ್ಟ್' (Red Alert) ಘೋಷಿಸಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ರೆಡ್ ಅಲರ್ಟ್? ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ! ಸತತ ಮಳೆಯಿಂದಾಗಿ ಕೃಷ್ಣಾ, ಘಟಪ್ರಭಾ ಮತ್ತು ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ. ಇದೇ ವೇಳೆ ಪಶ್ಚಿಮ ಘಟ್ಟಗಳ ರಸ್ತೆಗಳು ಹಾಗೂ ಹೆದ್ದಾರಿಗಳ ಪಕ್ಕದಲ್ಲಿ ಭೂಕುಸಿತ (Landslides) ಸಂಭವಿಸುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಘಾಟಿ ಪ್ರದೇಶಗಳಲ್ಲಿ ಚಲಿಸುವಾಗ ಅತ್ಯಂತ ಜಾಗರೂಕರಾಗಿರಬೇಕು ಎಂದು ಎಚ್ಚರಿಸಲಾಗಿದೆ. ಸಾರ್ವಜನಿಕರಿಗೆ ಜಿಲ್ಲಾಡಳಿತದ ಕಟ್ಟುನಿಟ್ಟಿನ ಸೂಚನೆಗಳು! ಪ್ರವಾಸಿಗರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ನದಿ ತೀರ, ಜಲಪಾತಗಳು ಹಾಗೂ ಅಪಾಯಕಾರಿ ಹಳ್ಳಗಳ ಬಳಿ ಹೋಗಬಾರದು. ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಬೋಟ್ಗಳನ್ನು ಸಮುದ್ರಕ್ಕೆ ಇಳಿಸಬಾರದು. ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣವೇ ಆಯಾ ಜಿಲ್ಲಾಡಳಿತದ ತುರ್ತು ಸಹಾಯವಾಣಿಯನ್ನು ಸಂಪರ್ಕಿಸಬೇಕು. 64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್ ಅಲರ್ಟ್ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತದೆ. :
ಕರಾವಳಿ ಮತ್ತು ಪಶ್ಚಿಮ ಘಟ್ಟಗಳ ಮಲೆನಾಡು ಭಾಗದಲ್ಲಿ ಮೇಘಸ್ಫೋಟದ ಸದೃಶ ಮಳೆಯಾಗುವ ಮುನ್ಸೂಚನೆ ಇದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ.
ಧಾರಾಕಾರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಸರಣಿ ಮಳೆ ಪೀಡಿತ ತಾಲೂಕುಗಳಲ್ಲಿ ಈಗಾಗಲೇ ಶಾಲಾ-ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ರಜೆ ಪ್ರಕಟಿಸಲಾಗಿದೆ. ನದಿಗಳು, ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ.

