ಹಾಸನ :ಸಾರ್ವಜನಿಕರ ದುಡ್ಡಿನಲ್ಲಿ ನಮ್ಮ ಫೋಟೋಗಳನ್ನು ಹಾಕಿ ಬಿಂಬಿಸಿಕೊಳ್ಳುವುದು ತಪ್ಪು ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ.
ಹಾಸನದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ ಅವರು, ಸಾರ್ವಜನಿಕರ ದುಡ್ಡಿನಲ್ಲಿ ನಮ್ಮ ಫೋಟೋಗಳನ್ನು ಹಾಕಿ ಬಿಂಬಿಸಿಕೊಳ್ಳುವುದು ತಪ್ಪು.
ಮಾಜಿ ಸಚಿವ ರೇವಣ್ಣ ಅವರು ಹಾಸನ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಎಲ್ಲಾದರೂ ಒಂದು ಫೋಟೋ ಹಾಕಿಕೊಂಡಿದ್ದಾರಾ ಎಂದು ಪ್ರಶ್ನಿಸಿದ ಸಂಸದ ಪ್ರಜ್ವಲ್, ಸರ್ಕಾರದ ದುಡ್ಡಿನಲ್ಲಿ ಸಾರ್ವಜನಿಕರ ಕೆಲಸ ಮಾಡುವುದನ್ನು ಸಾಧನೆ ಎನ್ನಲಾಗದು ಎಂದು ಹೇಳಿದರು.

