Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿ 'ಅನಲಾಗ್ ಪನ್ನೀರ್' ನಿಷೇಧ: ಆಹಾರ ಸುರಕ್ಷತಾ ಇಲಾಖೆಯಿಂದ ಕಠಿಣ ಕ್ರಮ

ರಾಜ್ಯದಲ್ಲಿ 'ಅನಲಾಗ್ ಪನ್ನೀರ್' ನಿಷೇಧ: ಆಹಾರ ಸುರಕ್ಷತಾ ಇಲಾಖೆಯಿಂದ ಕಠಿಣ ಕ್ರಮ

(ನ್ಯೂಸ್‌ ಕಡಬ) newskadaba.com, ಆ.22: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು 'ಅನಲಾಗ್ ಪನ್ನೀರ್' ಬಳಕೆಯನ್ನು 1 ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ.ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಹೆಚ್ಚಿನ ಲಾಭಕ್ಕಾಗಿ ಹಾಲಿನ ಬದಲು ಸಸ್ಯಜನ್ಯ ಎಣ್ಣೆ, ಪಿಷ್ಟ ಮತ್ತು ಕೆಮಿಕಲ್‌ಗಳನ್ನು ಬಳಸಿ ಕೃತಕ ಪನ್ನೀರ್ ತಯಾರಿಸಿ ಗ್ರಾಹಕರಿಗೆ ನೀಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಕೃತಕ ಪನ್ನೀರ್‌ನಲ್ಲಿರುವ ರಾಸಾಯನಿಕಗಳು ಮತ್ತು ಕಳಪೆ ಕೊಬ್ಬಿನಾಂಶದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಹಾನಿಯುಂಟಾಗುವ ಸಾಧ್ಯತೆಯಿದೆ.

ಪನ್ನೀರ್ ತಯಾರಿಕೆಗೆ ಕಡ್ಡಾಯವಾಗಿ ಶುದ್ಧ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನಷ್ಟೇ ಬಳಸಬೇಕು..ಇಲಾಖೆಯ ಅಧಿಕಾರಿಗಳು ಹೋಟೆಲ್, ರೆಸ್ಟೋರೆಂಟ್ ಹಾಗೂ ಡೈರಿಗಳ ಮೇಲೆ ವಿಶೇಷ ದಾಳಿ ನಡೆಸಲಿದ್ದು, ನಿಯಮ ಉಲ್ಲಂಘಿಸಿದರೆ ಆಹಾರ ಸುರಕ್ಷತಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

Dailyhunt
Disclaimer: This content has not been generated, created or edited by Dailyhunt. Publisher: newskadaba.com