ನವದೆಹಲಿ: ಕರ್ನಾಟಕ ಹೈಕೋರ್ಟ್ ಸೇರಿದಂತೆ ವಿವಿಧ ಹೈಕೋರ್ಟ್ಗಳಿಗೆ ಒಟ್ಟು 15 ನ್ಯಾಯಮೂರ್ತಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಗುರುವಾರ ಅನುಮೋದನೆ ನೀಡಿದೆ.
ಕರ್ನಾಟಕ ಹೈಕೋರ್ಟ್ಗೆ ನ್ಯಾಯಮೂರ್ತಿಗಳಾಗಿ ಉಷಾರಾಣಿ, ಕೆ.ಎಸ್. ಭರತ್ ಕುಮಾರ್ ಮತ್ತು ನೇರಳೆ ವೀರಭದ್ರಯ್ಯ ಭವಾನಿ ಅವರ ಹೆಸರುಗಳನ್ನು ಸಿಜೆಐ ಸೂರ್ಯಕಾಂತ್ ನೇತೃತ್ವದ ಕೊಲಿಜಿಯಂ ಆಯ್ಕೆ ಮಾಡಿದೆ.
ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ದೆಹಲಿ ಹೈಕೋರ್ಟ್ಗಳಿಗೂ ನ್ಯಾಯಮೂರ್ತಿಗಳ ನೇಮಕಕ್ಕೆ ಅನುಮೋದನೆ ನೀಡಲಾಗಿದೆ.

