Dailyhunt Logo
  • Light mode
    Follow system
    Dark mode
    • Play Story
    • App Story
ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯ: ಡಿ.ಕೆ. ಶಿವಕುಮಾರ್

ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯ: ಡಿ.ಕೆ. ಶಿವಕುಮಾರ್

ಬೆಂಗಳೂರು: ಅನಿವಾಸಿ ಭಾರತೀಯರಿಗೆ ರಾಜ್ಯದಲ್ಲಿ ‍ಪ್ರತ್ಯೇಕ ಸಚಿವಾಲಯ ರಚಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಅನಿವಾಸಿ ಕನ್ನಡಿಗರಿಗಾಗಿ ವೇದಿಕೆ ನೀಡುತ್ತಿದೆ ಪ್ರಜಾವಾಣಿ. ನಿಮ್ಮ ಲೇಖನ, ಸುದ್ದಿ, ಅಭಿಪ್ರಾಯಗಳನ್ನು ನಮಗೆ ಕಳುಹಿಸಿಕೊಡಿ.
(pvonline@prajavani.co.in)ಪ್ರಜಾವಾಣಿ ವೆಬ್‌ಸೈಟ್‌ನ ಹೊರನಾಡು ಕನ್ನಡಿಗರು ವಿಭಾಗಕ್ಕೆ ಭೇಟಿ ನೀಡಿಕರ್ನಾಟಕದ ಹಜ್ ಯಾತ್ರಿಕರಿಗೆ ಕೆಸಿಎಫ್ ನೆರವು: ಯಾತ್ರಿಗಳ ಸೇವೆಯಲ್ಲಿ ಕನ್ನಡಿಗರು

'ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು' ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳ ಸಭೆ ನಡೆಸಿದರು. ನಂತರ ಮಾಧ್ಯಮಗೋಷ್ಠಿ ನಡೆಸಿ ಸಭೆಯ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು.

'ನಮ್ಮ ಸರ್ಕಾರದಲ್ಲಿ ಅನಿವಾಸಿ ಭಾರತೀಯರ (ಎನ್‌ಆರ್ ಐ) ಸಚಿವಾಲಯ ತೆರೆಯಲು ಸರ್ಕಾರ ಮುಂದಾಗಿದೆ. ನಮ್ಮ ರಾಜ್ಯದಲ್ಲಿ ಎನ್‌ಆರ್ ಐಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿದ್ದರೆ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಈ ಸಚಿವಾಲಯ ಸಹಾಯವಾಗುತ್ತದೆ. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿರುವೆ' ಎಂದು ಹೇಳಿದ್ದಾರೆ

'ಸಾರ್ವಜನಿಕರ ಕುಂದುಕೊರತೆಯ ಸಚಿವಾಲಯ ಆರಂಭಿಸಿ, ಜನರ ಅರ್ಜಿ, ವಿಚಾರಧಾರೆ, ಸಮಸ್ಯೆ ಆಲಿಸಲು ಪ್ರತ್ಯೇಕ ಸಚಿವರ ನೇಮಕ ಮಾಡಲಾಗುವುದು. ಪ್ರತಿ ನಿತ್ಯ ವಿವಿಧ ತಂಡಗಳು ಪ್ರತಿಭಟನೆ ನಡೆಸುತ್ತಿದ್ದು, ಅವರ ವಿಚಾರ ಆಲಿಸಿ, ಸ್ಪಂದಿಸಲು ಸರ್ಕಾರ ಮುಂದಾಗಿದೆ' ಎಂದು ವಿವರಿಸಿದರು.

prajavani.netನ ಎನ್‌ಆರ್‌ಐ ಸೆಕ್ಷನ್‌ಗೆ ಭೇಟಿ ನೀಡಿಸಿಡ್ನಿಯ ಟೂನಗಬೀ ಶಾಲೆಯಲ್ಲಿ ಶಂಕರ ಜಯಂತಿಯ ಸಂಭ್ರಮ
Dailyhunt
Disclaimer: This content has not been generated, created or edited by Dailyhunt. Publisher: Prajavani