ಹಾಸನ: ಸಕಲೇಶಪುರ ಪುರಸಭೆ ಕಂದಾಯ ನಿರೀಕ್ಷಕ ಗೋಪಾಲಕೃಷ್ಣ (41) ನಗರದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಹೊರ ವಲಯದ ಚಿಕ್ಕಕೊಂಡಗೊಳ ನಿವಾಸಿಯಾಗಿದ್ದ ಗೋಪಾಲಕೃಷ್ಣ, ಎರಡು ವರ್ಷಗಳಿಂದ ಸಕಲೇಶಪುರ ಪುರಸಭೆ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.
'ನನಗೆ ಬದುಕಲು ಇಷ್ಟವಿಲ್ಲ. ಆದ್ದರಿಂದ ಸಾಯುತ್ತಿದ್ದೇನೆ' ಎಂದು ಗೋಪಾಲಕೃಷ್ಣ ಮರಣ ಪತ್ರದಲ್ಲಿ ಬರೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅನಾರೋಗ್ಯ ಕಾರಣದಿಂದಲೇ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಗ್ರಾಮ ಲೆಕ್ಕಿಗರೊಬ್ಬರು ಮೊನ್ನೆಯಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು.
