ಬೆಂಗಳೂರು: ರಾಜ್ಯದ 26 ಜಿಲ್ಲೆಗಳಲ್ಲಿ ಮಳೆಕೊರತೆಯಾಗಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ವಾಡಿಕೆಗಿಂತ ಶೇ 38ರಷ್ಟು ಕಡಿಮೆ ಮಳೆಯಾಗಿದೆ. ಪರಿಣಾಮವಾಗಿ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದ್ದು, ರಾಜ್ಯದ ಎಲ್ಲ ಜಲಾಶಯಗಳಲ್ಲಿ ಅವುಗಳ ಗರಿಷ್ಠ ಸಂಗ್ರಹ ಸಾಮರ್ಥ್ಯದ ಶೇ 50ರಷ್ಟು ನೀರೂ ಇಲ್ಲ.
ಜತೆಗೆ ಬಿತ್ತನೆಯೂ ಕುಂಠಿತವಾಗಿದ್ದು, ಆಹಾರ ಧಾನ್ಯ ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಅಪಾಯವಿದೆ ಎಂಬ ಅಂಶಗಳು ಜಿಲ್ಲಾಧಿಕಾರಿಗಳ ಜತೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಡೆಸಿದ ವಿಡಿಯೊ ಸಂವಾದದಲ್ಲಿ ಚರ್ಚೆಯಾಗಿದೆ. ರಾಜ್ಯದಲ್ಲಿನ ಈಗಿನ ಬರದ ಸ್ಥಿತಿಯ ವಿವರ ಈ ಮುಂದಿನಂತಿದೆ.




