Dailyhunt
ಕೋವಿಡ್ ಲಸಿಕೆಗೆ ಕಾಲಮಿತಿ ನಿಗದಿ ಮಾಡಲಾಗಿದೆಯೇ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್

ಕೋವಿಡ್ ಲಸಿಕೆಗೆ ಕಾಲಮಿತಿ ನಿಗದಿ ಮಾಡಲಾಗಿದೆಯೇ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್

ಬೆಂಗಳೂರು: ರಾಜ್ಯ ಎಲ್ಲ ಜನರಿಗೂ ಕೋವಿಡ್ ಲಸಿಕೆ ನೀಡಲು ಕಾಲಮಿತಿ ನಿಗದಿ ಮಾಡಿಕೊಳ್ಳಲಾಗಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೋವಿಡ್ ಸಂಬಂಧ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಲಸಿಕಾ ಅಭಿಯಾನದ ಕುರಿತು ಸರ್ಕಾರ ಸಲ್ಲಿಸಿದ ಅಂಕಿ-ಅಂಶ ಪರಿಶೀಲಿಸಿತು. ಜುಲೈ ಮತ್ತು ಆಗಸ್ಟ್‌ನಲ್ಲಿ ಎರಡನೇ ಡೋಸ್‌ಗೆ ಬರಲಿರುವ ಜನರಿಗೆ ಸಾಕಾಗುವಷ್ಟು ಲಸಿಕೆ ಲಭ್ಯವಿದೆ ಎಂಬುದನ್ನು ಪೀಠ ಗಮನಿಸಿತು.

ಶಾಲೆ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ನಿಯಮಿತವಾಗಿ ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಪದಾರ್ಥಗಳನ್ನು ನೀಡುವ ಕಾರ್ಯಕ್ರಮ ಮತ್ತೆ ಆರಂಭಿಸಲಾಗಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು. ಕಾಲೇಜು ತೆರೆಯಲು ಅನುಮತಿ ನೀಡಲಾಗಿದೆ.

ಆದರೆ, ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆಯೇ ಎಂಬುದರ ಕುರಿತು ದಾಖಲೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿತು.

ಕೋವಿಡ್ ಸೋಂಕಿತರು ಸಲ್ಲಿಸುವ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಕುಂದು ಕೊರತೆ ನಿವಾರಣಾ ವ್ಯವಸ್ಥೆಯನ್ನು
ಕೂಡಲೇ ಆರಂಭಿಸಬೇಕು ಎಂದು ತಿಳಿಸಿತು.

Dailyhunt
Disclaimer: This content has not been generated, created or edited by Dailyhunt. Publisher: Prajavani