Dailyhunt Logo
  • Light mode
    Follow system
    Dark mode
    • Play Story
    • App Story
'ಮಹಾತ್ಮ ಗಾಂಧಿ ಕೈಮಗ್ಗ ಯೋಜನೆ' ಘೋಷಿಸಿದ ನಿರ್ಮಲಾ ಸೀತಾರಾಮನ್

'ಮಹಾತ್ಮ ಗಾಂಧಿ ಕೈಮಗ್ಗ ಯೋಜನೆ' ಘೋಷಿಸಿದ ನಿರ್ಮಲಾ ಸೀತಾರಾಮನ್

ವದೆಹಲಿ: ಖಾದಿ, ಕೈಮಗ್ಗ ಮತ್ತು ಕರಕುಶಲ ವಲಯಗಳನ್ನು ಬಲಪಡಿಸುವ ಉದ್ದೇಶದಿಂದ 'ಮಹಾತ್ಮ ಗಾಂಧಿ ಕೈಮಗ್ಗ ಯೋಜನೆ'ಯನ್ನು ಪ್ರಾರಂಭಿಸುವುದಾಗಿ 2026-27ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಖಾದಿ, ಕೈಮಗ್ಗ ಮತ್ತು ಕರಕುಶಲ ವಸ್ತುಗಳನ್ನು ಉದ್ದೇಶಿಸುವ ಗುರಿಯನ್ನು ಹೊಂದಿರುವ ಪ್ರಮುಖ ಪ್ರಯತ್ನವಾದ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಉಪಕ್ರಮವನ್ನು ಘೋಷಿಸುವ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಭಾರತದ ಸಾಂಪ್ರದಾಯಿಕ ಕರಕುಶಲ ಕ್ಷೇತ್ರದ ಮೇಲೆ ವಿಶೇಷ ಗಮನ ಸೆಳೆದಿದ್ದಾರೆ.

Union Budget 2026: ದೇಶದ ಪ್ರತಿ ಜಿಲ್ಲೆಗೆ ಬಾಲಕಿಯರ ಹಾಸ್ಟೆಲ್‌ ಘೋಷಣೆUnion Budget 2026: ಯಾವುದೆಲ್ಲ ಇಳಿಕೆ, ಯಾವುದೆಲ್ಲ ಏರಿಕೆ?

ಜವಳಿ ಉದ್ಯಮ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರುವ ಸಲುವಾಗಿ ಸರ್ಕಾರ ಗಮನಹರಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ ವೇಳೆ ಹೇಳಿದ್ದಾರೆ. 'ಮೆಗಾ ಜವಳಿ ಪಾರ್ಕ್‌ಗಳನ್ನು ಸ್ಥಾಪನೆ ಹಾಗೂ ಖಾದಿ ಮತ್ತು ಕೈಮಗ್ಗವನ್ನು ಬಲಪಡಿಸಲು ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಉಪಕ್ರಮ ಪ್ರಾರಂಭಿಸುವುದಾಗಿ ಹೇಳಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani