ಕೊಚ್ಚಿ: ಎರ್ನಾಕುಳಂ ಜಿಲ್ಲೆಯ ಕಾಲಡಿ ಸಮೀಪದ ಮಲಯಾಟ್ಟೂರಿನ ಗಣಿಗಾರಿಕೆ ಪ್ರದೇಶದ ಕಟ್ಟಡವೊಂದರಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.
ಸುಮಾರು ಬೆಳಿಗ್ಗೆ 3 ಗಂಟೆಗೆ ಅವಘಡ ಸಂಭವಿಸಿದೆ. ಅವಶೇಷಗಳಡಿಯಿಂದ ಶವಗಳನ್ನು ಹೊರ ತೆಗೆಯಲಾಗಿದೆ. ಈ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

