Dailyhunt
ಮೌಲಾನಾ ಅಬ್ದುಲ್ ಕಲಾಂ ಆಜಾದ್‌ ಜನ್ಮ ದಿನಾಚರಣೆ

ಮೌಲಾನಾ ಅಬ್ದುಲ್ ಕಲಾಂ ಆಜಾದ್‌ ಜನ್ಮ ದಿನಾಚರಣೆ

ಗುಡಿಬಂಡೆ: ದೇಶದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಉರ್ದು ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.

ತಹಶೀಲ್ದಾರ್ ಸಿಗ್ಬತ್ತುಲ್ಲಾ ಮಾತನಾಡಿ, ದೇಶದಲ್ಲಿ ಮೊದಲು ಶಿಕ್ಷಣ ಕ್ರಾಂತಿ ಪ್ರಾರಂಭಿಸಿದ್ದು ಮೌಲಾನಾ ಅಬ್ದುಲ್ ಕಲಾಂ ಆಜಾದ್. ಶಿಕ್ಷಣ ಪಡೆಯಲು ಯಾವುದೇ ವಯಸ್ಸಿನ ನಿರ್ಬಂಧವಿಲ್ಲ. ಓದಬೇಕೆಂಬ ಛಲವೊಂದಿರಬೇಕು ಎಂದು ಹೇಳಿದರು.

ಶಿಕ್ಷಣ ಇಲಾಖೆಯ ಶಶಿಕಲಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಮಾತ ನಾಡಿದರು. ರಾಜ್ಯ ಉರ್ದು ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮೊಹಮದ್ ನಾಸೀರ್, ನಿರ್ದೇಶಕರಾದ ಜಾಕೀರ್, ಸಮಿಉಲ್ಲಾ, ಅಜ್ಮಲ್ ‌ಖಾನ್, ಮುನೀರ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ವೆಂಕಟೇಶ್ ಹಾಜರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani