ದೇವನಹಳ್ಳಿ: ಮುಂದಿನ ವರ್ಷದೊಳಗೆ ವಿಮಾನ ನಿಲ್ದಾಣಕ್ಕೆ ಮೆಟ್ರೊ ಸಂಚಾರ ಕಾರ್ಯಾರಂಭ ಮಾಡಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿ ಶನಿವಾರ ಕೆಂಪೇಗೌಡ ಜಯಂತಿ ಅಂಗವಾಗಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಕಂಚಿನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಮುಂದಿನ ಎರಡು ವರ್ಷದಲ್ಲಿ 500 ಕಿಲೋ ಮೀಟರ್ ಮೆಟ್ರೊ ಜಾಲ ವಿಸ್ತರಣೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಇರುವ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆ ಬಳಿ ಶನಿವಾರ ನಡೆದ ಕೆಂಪೇಗೌಡ ಜಯಂತಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ನಂಜಾವಧೂತ ಸ್ವಾಮೀಜಿ ನಿಶ್ಚಲಾನಂದನಾಥ ಸ್ವಾಮೀಜಿ ಇತರರು ಭಾಗವಹಿಸಿದ್ದರು
