ತುಮಕೂರು: ಪದೇಪದೇ ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಜೆ.ಸಿ.ಮಾಧುಸ್ವಾಮಿ ಈಗ ಆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
'ಇಂತಹ ಸ್ಥಿತಿ ನೋಡಿ ಬೇಸರವಾಗಿತ್ತು. ಮನಸ್ಸಿಗೆ ನೋವಾಗಿತ್ತು. ನನ್ನ ಒಳ್ಳೆಯತನ, ನಿಷ್ಠೆಯನ್ನು ದುರುಪಯೋಗ ಮಾಡಿಕೊಳ್ಳಲಾಗಿತ್ತು. ಪದೇಪದೇ ಖಾತೆ ಬದಲಾವಣೆ ಮಾಡುವ ಮೂಲಕ ಸಮಾಜಕ್ಕೆ ಯಾವ ಸಂದೇಶ ಕೊಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದೆ. ಈ ಎಲ್ಲಾ ಬೆಳವಣಿಗೆಗಳಿಂದ ರೆಬಲ್ ಆಗಿದ್ದು ನಿಜ. ಗಣರಾಜ್ಯೋತ್ಸವ ಧ್ವಜಾರೋಹಣದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದು ಸತ್ಯ' ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
'ನನಗೆ ದೊಡ್ಡ ಖಾತೆಗಳನ್ನು ಕೊಡಿ ಎಂದು ಕೇಳಿಲ್ಲ. ಯಾವುದಾದರೂ ಖಾತೆ ಕೊಡಿ.

